Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:12 - ಕನ್ನಡ ಸತ್ಯವೇದವು J.V. (BSI)

12 ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:12
19 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಅಸ್ತವಿುಸಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.


ಹರ್ಷಾನಂದಗಳು ತೋಟಗಳಿಂದ ತೊಲಗಿವೆ, ದ್ರಾಕ್ಷೆಯ ತೋಟಗಳಲ್ಲಿ ಉತ್ಸಾಹಧ್ವನಿಯೂ ಉಲ್ಲಾಸದ ಆರ್ಭಟವೂ ಇರುವದಿಲ್ಲ, ತುಳಿಯುವವರು ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ, ಅವರ ಕೂಗನ್ನು ನಿಲ್ಲಿಸಿಬಿಟ್ಟಿದ್ದೇನೆ.


ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ; ಹರ್ಷೋಲ್ಲಾಸಗಳು ನಮ್ಮ ದೇವರ ಆಲಯದೊಳಗಿಂದ ತೊಲಗಿದವಲ್ಲಾ!


ಹೊಲವು ಹಾಳಾಗಿದೆ, ದೇಶವು ದುಃಖಿಸುತ್ತದೆ, ಏಕಂದರೆ ಧಾನ್ಯವು ಸೂರೆಯಾಗಿದೆ, ದ್ರಾಕ್ಷಾರಸವು ತಗ್ಗಿದೆ, ಎಣ್ಣೆಯು ಕುಗ್ಗಿದೆ.


ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ದ್ರಾಕ್ಷೆ, ಅಂಜೂರ, ದಾಳಿಂಬರ, ಒಲೀವ, ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿವಸ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.


ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.


ಅಯ್ಯೋ, ಸೂರೆಹೋದೆವು, ಬಹು ನಾಶವಾದೆವು ಎಂಬ ಕೂಗಾಟವು ಹೊರೊನಯಿವಿುನಿಂದ ಕೇಳಬರುತ್ತದೆ!


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ, ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ; ಸುಗ್ಗಿಕಾಲದಲ್ಲಿ ಜನರು ಹರ್ಷಿಸುವ ಹಾಗೂ ಕೊಳ್ಳೆಯನ್ನು ಹಂಚಿಕೊಳ್ಳುವವರು ಹೆಚ್ಚಳಪಡುವ ಹಾಗೂ ನಿನ್ನ ಮುಂದೆ ಆನಂದಿಸುತ್ತಾರೆ.


ನಿನ್ನ ಉದ್ಯಾನದಲ್ಲಿ ದಾಳಿಂಬರದ ವನ, ಉತ್ತಮಫಲ, ಜಟಾಮಾಂಸಿ, ಗೋರಂಟೆ,


ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರುವೃಕ್ಷದ ಹಾಗೆ ವೃದ್ಧಿಯಾಗುವರು.


ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಅವರಿಗಿರುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.


ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯಿದರು; ಇಬ್ಬರು ಅದನ್ನು ಅಡ್ಡದಂಡಿಗೆಯಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನೂ ತಂದರು.


ದ್ರಾಕ್ಷಾರಸವು ವ್ಯಸನಭರಿತವಾಗಿದೆ, ದ್ರಾಕ್ಷೆಯ ಬಳ್ಳಿಯು ಬಾಡಿದೆ, ಹರ್ಷಹೃದಯರೆಲ್ಲಾ ನರಳುತ್ತಾರೆ.


ಮಾರಣೆಯ ಅರುಣೋದಯದಲ್ಲಿ ದೇವರು ಒಂದು ಹುಳಕ್ಕೆ ಅಪ್ಪಣೆಮಾಡಿದನು; ಅದು ಸೋರೆಗಿಡವನ್ನು ಹೊಡೆಯಲು ಒಣಗಿ ಹೋಯಿತು.


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು