Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:1 - ಕನ್ನಡ ಸತ್ಯವೇದವು J.V. (BSI)

1 ಇಗೋ, ಆ ದಿನಗಳಲ್ಲಿ, ನಾನು ಯೆಹೂದದ ಮತ್ತು ಯೆರೂಸಲೇವಿುನ ದುರವಸ್ಥೆಯನ್ನು ತಪ್ಪಿಸುವ ಕಾಲದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:1
23 ತಿಳಿವುಗಳ ಹೋಲಿಕೆ  

ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದೀ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದೀ.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.


ಸೊದೋಮ್, ಆಕೆಯ ಕುಮಾರ್ತೆಯರು, ಸಮಾರ್ಯ, ಆಕೆಯ ಕುಮಾರ್ತೆಯರು, ಇವರ ದುರವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರವಸ್ಥೆಯನ್ನೂ ತಪ್ಪಿಸುವೆನು.


ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.


ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು.


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು