Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:11 - ಕನ್ನಡ ಸತ್ಯವೇದವು J.V. (BSI)

11 ಸುತ್ತಣ ಜನಾಂಗಗಳೇ, ತ್ವರೆಪಡಿರಿ, ನೀವೆಲ್ಲರೂ ಬನ್ನಿರಿ, ಕೂಡಿಕೊಳ್ಳಿರಿ; ಯೆಹೋವನೇ, ನಿನ್ನ ಶೂರರನ್ನು [ರಣರಂಗಕ್ಕೆ] ಇಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ಜನಾಂಗದವರೇ, ತ್ವರೆಪಡಿರಿ. ಆ ಸ್ಥಳದಲ್ಲಿ ಒಟ್ಟುಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:11
14 ತಿಳಿವುಗಳ ಹೋಲಿಕೆ  

ನಾನು ಆರಿಸಿಕೊಂಡವರಿಗೆ ಅಪ್ಪಣೆಮಾಡಿದ್ದೇನೆ. ಹೌದು, ಉತ್ಸಾಹದಿಂದ ಮೆರೆಯುವ ಆ ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರನ್ನು ಕರೆದಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಎತ್ತರ ಮರಗಳು ನೆಲದ ಪಾಲಾಗುವವು; ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಮುಟ್ಟಿನಿಂದ ಕಡಿದುಬಿಡುವನು; ಲೆಬನೋನಿನ ವನವು ಆ ಬಲಿಷ್ಠನಿಂದ ಬಿದ್ದುಹೋಗುವದು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು