Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:4 - ಕನ್ನಡ ಸತ್ಯವೇದವು J.V. (BSI)

4 ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತ್ಯಾ ಶಬ್ದಾತ್ ಜಿವ್ ಹೊತ್ತೊ, ತೊ ಜಿವ್ ಸಗ್ಳ್ಯಾ ಲೊಕಾಕ್ನಿ ಉಜ್ವೊಡ್ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:4
30 ತಿಳಿವುಗಳ ಹೋಲಿಕೆ  

ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ತಂದೆಯು ತಾನು ಹೇಗೆ ಸ್ವತಃಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃಜೀವವುಳ್ಳವನಾಗಿರುವಂತೆ ಮಾಡಿದನು.


ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು.


ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು;


ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು, ಆ ಜೀವವು ಆತನ ಮಗನಲ್ಲಿ ಅದೆ ಎಂಬದೇ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷರಾಗುವಿರಿ.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಮೊದಲನೆಯ ಮನುಷ್ಯನಾದ ಆದಾಮನು ಬದುಕುವ ಪ್ರಾಣಿಯಾದನೆಂದು ಬರೆದದೆಯಲ್ಲಾ. ಕಡೇ ಆದಾಮನೋ ಬದುಕಿಸುವ ಆತ್ಮನು.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು