Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:51 - ಕನ್ನಡ ಸತ್ಯವೇದವು J.V. (BSI)

51 ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಾನಾ ತೆನಿ ತೆಂಕಾ, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ: ಮಾನ್ಸಾಚ್ಯಾ ಲೆಕಾಚ್ಯಾ ವರ್ತಿ ಸರ್ಗ್ ಉಗ್ಡುನ್ ದೆವಾಚಿ ದುತಾ ಚಡ್ತಲೆ ಅನಿ ಉತರ್ತಲೆ ತುಮಿ ಬಗ್ತ್ಯಾಶಿ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:51
55 ತಿಳಿವುಗಳ ಹೋಲಿಕೆ  

ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ಅಗೋ, ಆಕಾಶವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವದನ್ನೂ ನೋಡುತ್ತೇನೆ ಎಂದು ಹೇಳಿದನು.


ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು.


ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ಅವನು ಧ್ಯಾನ ಪರವಶನಾಗಿ ಆಕಾಶವು ತೆರೆದಿರುವದನ್ನೂ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಏನೋ ಒಂದು ವಸ್ತುವು ಭೂವಿುಯ ಮೇಲೆ ಇಳಿಯುವದನ್ನೂ ಕಂಡನು.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಲ್ಲಿ ಆಕಾಶವು ತೆರೆಯಿತು;


ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.


ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ಆ ದಿನದಲ್ಲಿ ಆತನು ತನ್ನ ಪವಿತ್ರರ ಮೂಲಕ ಪ್ರಭಾವ ಹೊಂದುವವನಾಗಿಯೂ ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವವನಾಗಿಯೂ ಬರುವಾಗ ಅಂಥವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ಈ ವಿಷಯದಲ್ಲಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಅಕಸ್ಮಾತ್ತಾಗಿ ಅವರ ಬಳಿಯಲ್ಲಿ ನಿಂತುಕೊಂಡರು.


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯೌವನಸ್ಥನಾಗಿದ್ದಾಗ ನೀನೇ ನಡುವನ್ನು ಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿಕೊಂಡು ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂಡು ಹೋಗುವನು ಎಂದು ಹೇಳಿದನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ; ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ, ಆದರೆ ಲೋಕವು ಸಂತೋಷಿಸುವದು; ನಿಮಗೆ ದುಃಖವಾಗುವದು, ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವದು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ದಣಿಗಿಂತ ಆಳು ದೊಡ್ಡವನಲ್ಲ, ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ;


ಮತ್ತು ಮಗನು ಮನುಷ್ಯಕುಮಾರನಾಗಿರುವದರಿಂದ ತೀರ್ಪುಮಾಡುವ ಅಧಿಕಾರವನ್ನೂ ಅವನಿಗೆ ಕೊಟ್ಟನು.


ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು ಅಂದನು.


ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಅಂದನು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.


ಯೇಸು - ನನಗಾಗಿ ಪ್ರಾಣ ಕೊಟ್ಟೀಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನ ವಿಷಯದಲ್ಲಿ ಅವನನ್ನು ಅರಿಯೆನೆಂದು ಮೂರು ಸಾರಿ ಹೇಳುವ ತನಕ ಕೋಳಿ ಕೂಗುವದೇ ಇಲ್ಲ ಅಂದನು.


ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.


ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು