Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:24 - ಕನ್ನಡ ಸತ್ಯವೇದವು J.V. (BSI)

24 ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜುದೆವ್ ಲೊಕಾ ತ್ಯೆಚ್ಯಾ ಭೊತ್ಯಾನಿ ಗೊಳಾ ಹೊಲಿ, ಅನಿ, “ಅಮ್ಕಾ ಅನಿ ಕವ್ಡೆ ಪತರ್ ಸಾಂಗಿನಸ್ತಾನಾಚ್ ರ್‍ಹಾತೆಯ್? ಮನುನ್ ಅಮ್ಕಾ ಖರೆಚ್! ಫೊಡುನ್ ಸಾಂಗ್” ತಿಯಾ ಮೆಸ್ಸಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:24
13 ತಿಳಿವುಗಳ ಹೋಲಿಕೆ  

ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ


ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು


ಆಗ ಅವರು - ನೀನು ಯಾರು? ಅಂದಾಗ ಯೇಸು - ನಾನು ನಿಮಗೆ ಹೇಳಿದಂಥದೇ.


ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.


ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.


ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರುನೋಡುವವರಾಗಿದ್ದದರಿಂದ ಅವರೆಲ್ಲರು ಯೋಹಾನನ ವಿಷಯವಾಗಿ - ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ಆತನು ಈ ಮಾತನ್ನು ಏನೂ ಗುಂಬವಿಲ್ಲದೆ ಹೇಳಿದನು. ಆಗ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು


ಯೆಹೂದ್ಯರು ಆತನನ್ನು ಹೊಡೆದು ಕೊಲ್ಲಬೇಕೆಂದು ತಿರಿಗಿ ಕಲ್ಲುಗಳನ್ನು ತೆಗೆದುಕೊಂಡು ಬರಲು


ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು