Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:19 - ಕನ್ನಡ ಸತ್ಯವೇದವು J.V. (BSI)

19 ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಜುದೆಯಾತ್ಲಿ ಲೈ ಲೊಕಾ ಅಪ್ನಾಚ್ಯಾ ಭಾವಾಚ್ಯಾ ಮರ್‍ನಾಕ್ ಲಾಗುನ್ ದುಖಾತ್ ಹೊತ್ತ್ಯಾ ಮಾರ್ಥಾಕ್ ಅನಿ ಮರಿಕ್ ಭೆಟುಕ್ ಮನುನ್ ಯೆಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:19
28 ತಿಳಿವುಗಳ ಹೋಲಿಕೆ  

ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಮರಿಯಳ ಕೂಡ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು - ಆಕೆ ತಟ್ಟನೆ ಎದ್ದು ಹೊರಗೆ ಹೋಗುವದನ್ನು ಕಂಡು ಈಕೆ ಅಳುವದಕ್ಕಾಗಿ ಸಮಾಧಿಗೆ ಹೋಗುತ್ತಾಳೆಂದು ನೆನಸಿ ಆಕೆಯ ಹಿಂದೆ ಹೋದರು.


ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವದಕ್ಕೆ ಶಕ್ತರಾಗುತ್ತೇವೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಯೆರೂಸಲೇಮ್ ಯುವತಿಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಉದಾಹರಣೆಯನ್ನು ಎಲ್ಲಿ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ಈ ವಿಪತ್ತುಗಳಿಂದ ಅಳುವೆನು, ನನ್ನನ್ನು ಸಂತೈಸಿ ದಣುವಾರಿಸತಕ್ಕವನು ದೂರವಾಗಿರುವದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದಾಗ


ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ಸಹತಾಪದಿಂದ ನಿನಗಾಗಿ ಬಡುಕೊಳ್ಳುವವರು ಯಾರಿದ್ದಾರೆ? ನಿನಗೆ ಈ ಎರಡು ಬಾಧೆಗಳು ಬಂದಿವೆ, [ನಿನ್ನ ದೇಶವು] ಹಾಳುಪಾಳಾಗಿದೆ, [ನಿನ್ನ ಪ್ರಜೆಗೆ] ಕ್ಷಾಮವೂ ಖಡ್ಗವೂ ಪ್ರಾಪ್ತವಾಗಿವೆ; ನಾನು ನಿನ್ನನ್ನು ಹೇಗೆ ಸಂತೈಸಲಿ?


ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸವಾಗಿದ್ದರು.


ಅವರಲ್ಲಿದ್ದ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು ಅವರ ಎಲುಬುಗಳನ್ನು ಅಲ್ಲಿದ್ದ ಏಲಾವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸಮಾಡಿದರು.


ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ


ಬೇಥಾನ್ಯದ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಅದು ಮಾರ್ಥಳು ಮರಿಯಳು ಎಂಬ ಅಕ್ಕತಂಗಿಯರು ಇದ್ದ ಊರು.


ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು


ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ -


ಯೆಹೂದ್ಯರು ನೋಡಿ - ಆಹಾ, ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದನು ಅಂದುಕೊಂಡರು.


ಮರಿಯಳ ಬಳಿಗೆ ಬಂದ ಯೆಹೂದ್ಯರು ಆತನು ಮಾಡಿದ ಕಾರ್ಯವನ್ನು ನೋಡಿದಾಗ ಅವರಲ್ಲಿ ಅನೇಕರು ಆತನನ್ನು ನಂಬಿದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು