Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:39 - ಕನ್ನಡ ಸತ್ಯವೇದವು J.V. (BSI)

39 ಯೇಸು - ಆ ಕಲ್ಲನ್ನು ತೆಗೆದುಹಾಕಿರಿ ಅನ್ನಲು ತೀರಿಹೋದವನ ಅಕ್ಕನಾದ ಮಾರ್ಥಳು - ಸ್ವಾಮೀ, ಅವನು ಸತ್ತು ನಾಲ್ಕು ದಿವಸವಾಯಿತು; ಈಗ ನಾತ ಹುಟ್ಟಿದೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್, “ಹ್ಯೊ ಗುಂಡೊ ಕಡೆಕ್ ಕಾಡಾ!” ಮನುನ್ ಹುಕುಮ್ ದಿಲ್ಯಾನ್. ತನ್ನಾ ಮಾರ್ಥಾನ್ ತ್ಯಾ ಮರಲ್ಲ್ಯಾ ಮಾನ್ಸಾಚ್ಯಾ ಭೆನಿನ್, “ಧನಿಯಾ ತೆಕಾ ಸಮಾದಿತ್ ಥವ್ನ್ ಚಾರ್ ದಿಸಾ ಹೊಲಿ ತೆಕಾ ಬುರ್ಶಿ ವಾಸ್ ಪಡ್ಲಾ ಅಶಿಲ್!” ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:39
11 ತಿಳಿವುಗಳ ಹೋಲಿಕೆ  

ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ನಾಲ್ಕು ದಿವಸವಾಯಿತೆಂದು ಆತನಿಗೆ ತಿಳಿದುಬಂತು.


ಸಮಾಧಿಗೆ ಮುಚ್ಚಿದ್ದ ಕಲ್ಲು ಬಹಳ ದೊಡ್ಡದಾಗಿದ್ದದರಿಂದ ಅವರು - ಸಮಾಧಿಯ ಬಾಗಿಲಿಂದ ಆ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರಿದ್ದಾರೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಾ ಇರಲಾಗಿ


ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಮರಣವನ್ನು ತಪ್ಪಿಸಿಕೊಳ್ಳುವದಕ್ಕೆ ಎಷ್ಟು ಹಣಕೊಟ್ಟರೂ ಸಾಲುವದೇ ಇಲ್ಲ; ಅಂಥ ಪ್ರಯತ್ನವನ್ನು ನಿಷ್ಫಲವೆಂದು ಬಿಟ್ಟೇಬಿಡಬೇಕು.


ನಾನು ನಿಮ್ಮಲ್ಲಿ ಪರದೇಶದವನೂ ಪರವಾಸಿಯೂ ಆಗಿದ್ದೇನಷ್ಟೆ. ತೀರಿಹೋಗಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ನಿಮ್ಮಲ್ಲಿ ನನ್ನ ಸ್ವಂತಕ್ಕೆ ಭೂವಿುಯನ್ನು ಕೊಡಬೇಕೆಂದು ಕೇಳಿಕೊಂಡನು.


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು