Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:52 - ಕನ್ನಡ ಸತ್ಯವೇದವು J.V. (BSI)

52 ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಅನಿ ಖಾಲಿ ತೆಂಕಾ ಎವ್ಡೆಚ್ ನ್ಹಯ್, ಮಾಳ್ಬರ್ ಹೊವ್ನಗೆಲ್ಲ್ಯಾ ದೆವಾಚ್ಯಾ ಲೊಕಾಕ್ನಿ ಗೊಳಾ ಕರುನ್ ಎಕ್ ಕರುಕಸಾಟ್ನಿ ತೊ ಮರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:52
40 ತಿಳಿವುಗಳ ಹೋಲಿಕೆ  

ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು. ದೇವರು ಒಬ್ಬನೇ ಆಗಿರಲಾಗಿ ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.


ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡು ಮಾಡುವದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ ಎಂದು ಹೇಳಿದನು.


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದುಹೋದರೆ ದೀಪಾಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು