Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:10 - ಕನ್ನಡ ಸತ್ಯವೇದವು J.V. (BSI)

10 ಯೇಸು ಅವನಿಗೆ - ಸ್ನಾನಮಾಡಿಕೊಂಡವನ ಕಾಲುಗಳನ್ನು ತೊಳೆಯುವದಲ್ಲದೆ ಬೇರೇನೂ ತೊಳೆಯಬೇಕಾಗಿರುವದಿಲ್ಲ, ಅವನ ಮೈಯೆಲ್ಲಾ ಶುದ್ಧವಾಗಿದೆ. ನೀವೂ ಶುದ್ಧರಾಗಿದ್ದೀರಿ; ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ “ಪಾನಿ ನ್ಹಲ್ಲೆ ಪವಿತ್ರ್ ಹಾತ್ ತೆಂಚೆ ಪಾಯ್ ಎವ್ಡೆಚ್ ಧುಲ್ಯಾರ್ ಫಿರೆ ಸಗ್ಳೆ ಆಂಗುಚ್ ಧುತಲಿ ಗರಜ್ ನಾ. ಎಕ್ಲ್ಯಾಕ್ ಸೊಡುನ್ ತುಮಿ ಸಗ್ಳೆ ಜಾನಾ ಪವಿತ್ರ್ ಹಾಸಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:10
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ಶುದ್ಧರಾಗಿದ್ದೀರಿ.


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು.


ಅಜಾಜೇಲನಿಗೆ ಹೋತವನ್ನು ಬಿಟ್ಟು ಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ದೋಷವೂ ಇಲ್ಲ.


ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.


ಸೀಮೋನ ಪೇತ್ರನು - ಸ್ವಾಮೀ, ನನ್ನ ಕಾಲುಗಳನ್ನು ಮಾತ್ರವಲ್ಲದೆ ಕೈಗಳನ್ನೂ ತಲೆಯನ್ನೂ ಸಹ ತೊಳೆಯಬೇಕು ಅಂದನು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು