Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:18 - ಕನ್ನಡ ಸತ್ಯವೇದವು J.V. (BSI)

18 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾಚ್ ವಿಶಯಾತ್ ಬೊಲಿನಾ ಹೊಲಾ, ಮಿಯಾ ಎಚುನ್ ಕಾಡಲ್ಲ್ಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್, ಖರೆ ಪವಿತ್ರ್ ಪುಸ್ತಕಾತ್ ಮಾಜ್ಯಾ ವಾಂಗ್ಡಾ ಎಕುಚ್ ಭಾನ್ಯಾತ್ ಜೆವಲ್ಲೊ ಮಾಜೆ ವರ್ತಿ ಪರತ್ತಾ ” ಮನುನ್ ಲಿವಲ್ಲೆ ಖರೆ ಹೊವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:18
27 ತಿಳಿವುಗಳ ಹೋಲಿಕೆ  

ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಅದಕ್ಕಾತನು - ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.


ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.


ಆತನು ಅವರಿಗೆ - ಅವನು ನನ್ನ ಹನ್ನೆರಡು ಮಂದಿಯಲ್ಲಿ ಒಬ್ಬನು, ನನ್ನ ಸಂಗಡ ಬಟ್ಟಲಲ್ಲಿ ಕೈ ಅದ್ದುವವನೇ.


ಅದಕ್ಕೆ ಯೇಸು - ನಾನು ಈ ತುತ್ತನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ ಎಂದು ಹೇಳಿ ಆ ತುತ್ತನ್ನು ಅದ್ದಿ ತೆಗೆದು ಸೀಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.


ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.


ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಅವರು ಊಟಮಾಡುತ್ತಿರುವಾಗ ಆತನು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.


ಅವರು ಕೂತುಕೊಂಡು ಊಟಮಾಡುತ್ತಿರುವಾಗ ಯೇಸು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು, ಅವನು ನನ್ನ ಸಂಗಡ ಊಟಮಾಡುವವನೇ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.


ಇದನ್ನು ಹೇಳಿ ಯೇಸು ಆತ್ಮದಲ್ಲಿ ತತ್ತರಗೊಂಡು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ಸ್ಪಷ್ಟವಾಗಿ ಹೇಳಿದನು.


ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಅನುಮಾನಪಟ್ಟು ಒಬ್ಬರನ್ನೊಬ್ಬರು ನೋಡುವವರಾದರು.


ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಇದರಿಂದ ಯೇಸು ತಾನು ಎಂಥಾ ಸಾವು ಸಾಯುವೆನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ಅದನ್ನು ನೋಡಿ ಅವರು - ನಾವು ಇದನ್ನು ಹರಿಯಬಾರದು; ಚೀಟುಹಾಕಿ ಇದು ಯಾರಿಗೆ ಬರುವದೋ ನೋಡೋಣ ಎಂದು ಮಾತಾಡಿಕೊಂಡರು. ಇದರಿಂದ - ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು, ನನ್ನ ಅಂಗಿಗೋಸ್ಕರ ಚೀಟು ಹಾಕಿದರು ಎಂಬ ಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;


ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು