Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:14 - ಕನ್ನಡ ಸತ್ಯವೇದವು J.V. (BSI)

14 ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುತ್ತಾ ನನ್ನನ್ನೇ ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸತ್ಯದ ಆತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು ನಿಮಗೆ ತಿಳಿಸುವುದರ ಮೂಲಕ ನನ್ನನ್ನು ಮಹಿಮೆಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ನನ್ನನ್ನು ಮಹಿಮೆಪಡಿಸುವರು. ಏಕೆಂದರೆ ಅವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೊ ಮಾಕಾ ಮಹಿಮಾ ದಿತಾ, ಕಶ್ಯಾಕ್ ಮಟ್ಲ್ಯಾರ್ ತೊ ಮಿಯಾ ಸಾಂಗಲ್ಲೆ ಘೆತಾ ಅನಿ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:14
20 ತಿಳಿವುಗಳ ಹೋಲಿಕೆ  

ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ನಾವೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವದೆಂದು ಎದುರುನೋಡುತ್ತೇವೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಹೀಗಿರುವದರಿಂದ ನಾನು ನಿಮಗೆ ತಿಳಿಸುವದನ್ನು ಕೇಳಿರಿ; ದೇವರಾತ್ಮನ ಪ್ರೇರಣೆಯಿಂದ ಮಾತಾಡುವ ಯಾವ ಮನುಷ್ಯನಾದರೂ ಯೇಸುವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ, ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ದೇವರ ಆಜ್ಞೆ ಯಾವದಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಕ್ರಿಸ್ತನು ನಮಗೆ ಅಪ್ಪಣೆ ಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು