Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:27 - ಕನ್ನಡ ಸತ್ಯವೇದವು J.V. (BSI)

27 ನೀವು ನನ್ನ ಮೇಲೆ ಮಮತೆಯಿಟ್ಟು ನನ್ನನ್ನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮ ಮೇಲೆ ಮಮತೆ ಇಡುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತುಮಿ ಮಾಜೊ ಪ್ರೆಮ್ ಕರ್‍ಲ್ಯಾಶಿ ಅನಿ ಮಿಯಾ ದೆವಾಕ್ನಾ ಯೆಲಾ ಮನುನ್ ವಿಶ್ವಾಸ್ ಕರ್ಲ್ಯಾಶಿ ಮನುನ್ ಮಾಜೊ ಬಾಬಾ ತುಮ್ಚೊ ಪ್ರೆಮ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:27
26 ತಿಳಿವುಗಳ ಹೋಲಿಕೆ  

ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸುತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಮೊದಲನೆಯ ಮನುಷ್ಯನು ಭೂವಿುಯೊಳಗಿಂದ ಉತ್ಪನ್ನನಾಗಿ ಮಣ್ಣಿಗೆ ಸಂಬಂಧಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ನಾನು ಆತನನ್ನು ಬಲ್ಲೆನು; ಆತನ ಕಡೆಯಿಂದ ಬಂದವನಾದದರಿಂದಲೂ ನನ್ನನ್ನು ಆತನೇ ಕಳುಹಿಸಿದ್ದರಿಂದಲೂ ಆತನನ್ನು ಬಲ್ಲೆನೆಂದು ಕೂಗಿ ಹೇಳಿದನು.


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು