Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಅತ್ತಾ ಮಿಯಾ ತುಜೆಕ್ಡೆ ಯೆವ್ಲಾ, ಅನಿ ಮಿಯಾ ಹೆ ಸಗ್ಳೆ ಹ್ಯಾ ಜಗಾತ್ ಸಾಂಗ್ತಾ, ಕಶ್ಯಾಕ್ ಮಟ್ಲ್ಯಾರ್ ಮಾಜಿ ಕುಶಿ ಸಂಪುರ್ನ್ ರಿತಿನ್ ತೆಂಚ್ಯಾ ಮನಾತ್ನಿ ಭರುನ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:13
17 ತಿಳಿವುಗಳ ಹೋಲಿಕೆ  

ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂತಲೂ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೂ ಮದಲಿಂಗನ ಗೆಳೆಯನು ಅವನ ಹತ್ತರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಇದರಂತೆ ನನಗಿರುವ ಸಂತೋಷ; ಅದು ನೆರವೇರಿತು.


ನಮ್ಮುಭಯತರ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಈ ಮಾತುಗಳನ್ನು ಬರೆಯುತ್ತೇವೆ.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ನಿಮಗೆ ಬರೆಯುವದಕ್ಕೆ ನನಗೆ ಅನೇಕ ಸಂಗತಿಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವದಕ್ಕೆ ನನಗೆ ಮನಸ್ಸಿಲ್ಲ. ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತಾಡುವೆನೆಂದು ನಿರೀಕ್ಷಿಸುತ್ತೇನೆ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಅಳುತ್ತಾ ಬಿತ್ತುವವರು ಹಾಡುತ್ತಾ ಕೊಯ್ಯುವರು.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮಭರಿತರೂ ಆದರು.


ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು