Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:24 - ಕನ್ನಡ ಸತ್ಯವೇದವು J.V. (BSI)

24 ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಬಾಬಾ! ತಿಯಾ ತೆಂಕಾ ಮಾಜಾಕ್ಡೆ ದಿಲೆಯ್, ಅನಿ ಮಿಯಾ ಖೈ ರ್‍ಹಾತಾ ಥೈ ತೆನಿಬಿ ಹೊತ್ತೆ ಮಾಕಾ ಪಾಜೆ. ಅಶೆ ಹ್ಯೊ ಜಗ್ ರಚುಚ್ಯಾ ಅದ್ದಿಚ್ ತಿಯಾ ಮಾಜೊ ಪ್ರೆಮ್ ಕರುನ್ ಮಾಕಾ ದಿಲ್ಲಿ ಮಹಿಮಾ ತೆನಿಬಿ ಬಗಿ ಸರ್ಕೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:24
30 ತಿಳಿವುಗಳ ಹೋಲಿಕೆ  

ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರಕೊಂಡು ಬರಬೇಕೆಂದು ಹೇಳಿ


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ನಾನು ನನ್ನ ತಂದೆಯ ರಾಜ್ಯದಲ್ಲಿ ದ್ರಾಕ್ಷಾರಸವನ್ನು ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಇನ್ನು ಕುಡಿಯುವದೇ ಇಲ್ಲ ಎಂದು ನಿಮಗೆ ಹೇಳುತ್ತೇನೆ ಅಂದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು.


ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.


ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ನಾನು ಕೆಡಗೊಡಿಸದೆ ಅವನನ್ನು ಕಡೇದಿನದಲ್ಲಿ ಎಬ್ಬಿಸಬೇಕೆಂಬದೇ. ಮಗನನ್ನು ನೋಡಿ ಆತನನ್ನು ನಂಬುವ ಪ್ರತಿಯೊಬ್ಬನಿಗೆ


ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.


ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ; ನನ್ನ ಪ್ರೀತಿಯಲ್ಲಿ ನೆಲೆಗೊಂಡಿರ್ರಿ.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ನಾವು ಒಂದಾಗಿರುವ ಪ್ರಕಾರ ಅವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಅವರಿಗೆ ಕೊಟ್ಟಿದ್ದೇನೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು