Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:8 - ಕನ್ನಡ ಸತ್ಯವೇದವು J.V. (BSI)

8 ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಯಾ ಮಾಜ್ಯಾ ತಾಬೆತ್ ದಿಲ್ಲಿ ಖಬರ್ ಮಿಯಾ ತೆಂಕಾ ದಿಲಾ. ಅನಿ ತೆನಿ ತಿ ಸ್ವಿಕಾರ್ ಕರ್ಲ್ಯಾನಿ, ಅನಿ ಮಿಯಾ ತುಜೆಕ್ನಾಚ್ ಯೆಲಾ ಮನುನ್ ತೆಂಕಾ ಗೊತ್ತ್ ಹಾಯ್, ಅನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ತೆನಿ ವಿಶ್ವಾಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:8
31 ತಿಳಿವುಗಳ ಹೋಲಿಕೆ  

ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ನೀವು ನನ್ನ ಮೇಲೆ ಮಮತೆಯಿಟ್ಟು ನನ್ನನ್ನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮ ಮೇಲೆ ಮಮತೆ ಇಡುತ್ತಾನಲ್ಲವೇ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ವಿವೇಕಮಾರ್ಗದಲ್ಲಿ ಅಂದರೆ ನೀತಿನ್ಯಾಯಧರ್ಮಗಳಲ್ಲಿ ಶಿಕ್ಷಿತರಾಗುವರು.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿದಿರಿ, ಅದರಲ್ಲಿ ನಿಂತಿದ್ದೀರಿ.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ನೀನು ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಂತೆ ನಾನೂ ಇವರನ್ನು ಲೋಕಕ್ಕೆ ಕಳುಹಿಸಿಕೊಟ್ಟೆನು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಕಂದಾ, ಆಲಿಸಿ ನನ್ನ ಮಾತುಗಳನ್ನು ಕೇಳು; ಕೇಳಿದರೆ, ನಿನ್ನ ಜೀವಮಾನದ ವರುಷಗಳು ಹೆಚ್ಚುವವು.


ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು