Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:34 - ಕನ್ನಡ ಸತ್ಯವೇದವು J.V. (BSI)

34 ಆದರೂ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ತಿವಿದ ಕೂಡಲೆ ರಕ್ತವೂ ನೀರೂ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಸೈನಿಕರಲ್ಲಿ ಒಬ್ಬನು ತನ್ನ ಈಟಿಯಿಂದ ಯೇಸುವಿನ ಪಕ್ಕೆಗೆ ತಿವಿದನು. ಪಕ್ಕೆಯಿಂದ ರಕ್ತ ಮತ್ತು ನೀರು ಹೊರಗೆ ಹರಿದುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಎಕ್ ಸೈನಿಕಾನ್ ಕಶೆ ಕಾಯ್ಕಿ ಅಪ್ನಾಚ್ಯಾ ಬರ್ಚಿನಿ ಜೆಜುಚ್ಯಾ ಪಕ್ಡಿತ್ ಟೊಪ್ಲ್ಯಾನ್. ತನ್ನಾ ತಾಬೊಡ್ತೊಬ್ ರಗಾತ್ ಅನಿ ಪಾನಿ ಭಾಯ್ರ್ ಪಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:34
23 ತಿಳಿವುಗಳ ಹೋಲಿಕೆ  

ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಆತ್ಮ ನೀರು ರಕ್ತ ಎಂಬ ಮೂರು ಸಾಕ್ಷಿಗಳುಂಟು; ಈ ಮೂರು ಒಂದೇ ಅಭಿಪ್ರಾಯವಾಗಿ ಸಾಕ್ಷಿಹೇಳುತ್ತವೆ.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಮಹಾಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಕೂಡಿಬಂದು -


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.


ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಶಿಷ್ಯರು ಸ್ವಾವಿುಯನ್ನು ನೋಡಿದ್ದರಿಂದ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು