Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:36 - ಕನ್ನಡ ಸತ್ಯವೇದವು J.V. (BSI)

36 ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 “ತೆಚೆ ಎಕ್ ಸೈತ್ ಹಡ್ಡ್ ಮೊಡುನ್ ಹೊಯ್ನಾ. ಮನುನ್ ಪವಿತ್ರ್ ಪುಸ್ತಕಾತ್ ಸಾಂಗಟಲ್ಲೆ ಖರೆ ಹೊವ್‍ಸಾಟ್ನಿ ಹೆ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:36
10 ತಿಳಿವುಗಳ ಹೋಲಿಕೆ  

ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವದಿಲ್ಲ.


ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ವಿುಗಿಸಬಾರದು; ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ಪ್ರಕಾರವೇ ಅದನ್ನು ಆಚರಿಸಬೇಕು.


ಒಂದೇ ಮನೆಯಲ್ಲಿ ಅದನ್ನು ಊಟಮಾಡಬೇಕು; ಅದರಲ್ಲಿ ಸ್ವಲ್ಪವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಕೂಡದು.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಇದಾದ ಮೇಲೆ ಯೇಸು ಈಗ ಎಲ್ಲಾ ತೀರಿತೆಂದು ತಿಳಿದು ಶಾಸ್ತ್ರದ ಮಾತು ನೆರವೇರುವಂತೆ - ನನಗೆ ನೀರಡಿಕೆ ಆಗಿದೆ ಅಂದನು.


ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನಂದರೆ -


ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಅದನ್ನು ನೋಡಿ ಅವರು - ನಾವು ಇದನ್ನು ಹರಿಯಬಾರದು; ಚೀಟುಹಾಕಿ ಇದು ಯಾರಿಗೆ ಬರುವದೋ ನೋಡೋಣ ಎಂದು ಮಾತಾಡಿಕೊಂಡರು. ಇದರಿಂದ - ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು, ನನ್ನ ಅಂಗಿಗೋಸ್ಕರ ಚೀಟು ಹಾಕಿದರು ಎಂಬ ಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು