Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:6 - ಕನ್ನಡ ಸತ್ಯವೇದವು J.V. (BSI)

6 ಮಹಾಯಾಜಕರೂ ಓಲೇಕಾರರೂ ಆತನನ್ನು ಕಾಣುತ್ತಲೇ - ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು ಅವರಿಗೆ - ಬೇಕಾದರೆ ನೀವೇ ಅವನನ್ನು ತಕ್ಕೊಂಡುಹೋಗಿ ಶಿಲುಬೆಗೆ ಹಾಕಿಸಿರಿ; ನನಗೆ ಅವನಲ್ಲಿ ಅಪರಾಧವು ಕಾಣಿಸಲಿಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ, ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಯಾಜಕಾಂಚ್ಯಾ ಮುಖಂಡಾನಿ, ಅನಿ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾನಿ ತೆಕಾ ಬಗಟಲ್ಲ್ಯಾ ಬರಬ್ಬರ್, “ತೆಕಾ ಕುರ್ಸಾರ್ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ಪಿಲಾತಾನ್ ತೆಂಕಾ “ತುಮಿಚ್ ತೆಕಾ ಘೆವ್ನ್ ಜಾವಾ, ಅನಿ ಕುರ್ಸಾರ್ ಮಾರಾ, ಮಾಕಾ ತೆಕಾ ಮರ್‍ನಾಚಿ ಶಿಕ್ಷಾ ದಿ ಸರ್ಕೆ ಚುಕ್ ತೆಚ್ಯಾ ಭುತ್ತುರ್ ಗಾವುಕ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:6
15 ತಿಳಿವುಗಳ ಹೋಲಿಕೆ  

ಆಗ ಪಿಲಾತನು ಅವರಿಗೆ - ನೀವೇ ಅವನನ್ನು ತಕ್ಕೊಂಡುಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಅವನಿಗೆ ತೀರ್ಪುಮಾಡಿರಿ ಎಂದು ಹೇಳಿದನು. ಅದಕ್ಕೆ ಯೆಹೂದ್ಯರು - ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗಿಲ್ಲ ಅಂದರು.


ತರುವಾಯ ಪಿಲಾತನು ತಿರಿಗಿ ಹೊರಗೆ ಬಂದು ಯೆಹೂದ್ಯರಿಗೆ - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ಹೊರಗೆ ತರುತ್ತೇನೆ, ನೋಡಿರಿ ಎಂದು ಹೇಳಿದನು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.


ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುವದಿಲ್ಲವೆಂದು ಹೇಳಿದನು.


ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -


ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು.


ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು.


ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.


ಪಿಲಾತನು - ಸತ್ಯವಂದರೇನು? ಅಂದನು. ಇದನ್ನು ಹೇಳಿ ಪಿಲಾತನು ತಿರಿಗಿ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದು - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು