Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:9 - ಕನ್ನಡ ಸತ್ಯವೇದವು J.V. (BSI)

9 ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆ ಪಾನಿ ವಾಯ್ನ್ ಹೊಲ್ಲೆ ತ್ಯಾ ಮಾನ್ಸಾನ್ ತೆ ಚಾಟುನ್ ಬಗಟ್ಲ್ಯಾನ್, ಹೆ ವಾಯ್ನ್ ಖೈತ್ನಾ ಯೆಲ್ಲೆ ಮನುನ್ ತ್ಯಾ ಮಾನ್ಸಾಕ್ ಗೊತ್ತ್ ನತ್ತೆ .ಖರೆ ತೆ ಪಾನಿ ಕಾಡಲ್ಲ್ಯಾ ಆಳಾಕ್ನಿ ಗೊತ್ತ್ ಹೊತ್ತೆ, ತೆಚೆಸಾಟ್ನಿ ತೆನಿ ನ್ಹವ್ರ್ಯಾಕ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:9
6 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೇಸು, ತಾನು ನೀರನ್ನು ದ್ರಾಕ್ಷಾರಸವಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಬಂದನು. ಅಲ್ಲಿದ್ದಾಗ ಅರಮನೆಯ ಒಬ್ಬ ಪ್ರಧಾನನ ಮಗನು ಕಪೆರ್ನೌವಿುನಲ್ಲಿ ಅಸ್ವಸ್ಥನಾಗಿದ್ದನು.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ನಿನ್ನ ನೇಮಗಳನ್ನು ಕೈಕೊಂಡಿರುವದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.


ಯೇಸು ಅವರಿಗೆ - ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಟ್ಟಾರೋ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ;


ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.


ಆಗ ಅವರಿಗೆ - ಈಗ ಅದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಿದಾಗ ತಕ್ಕೊಂಡು ಹೋಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು