Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:17 - ಕನ್ನಡ ಸತ್ಯವೇದವು J.V. (BSI)

17 ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್ ತಿಕಾ, “ಮಾಕಾ ಧರುನ್ ಘೆವ್ನ್ ರಾವ್ನಕ್ಕೊ, ಮಿಯಾ ಅಜುನ್ ಮಾಜ್ಯಾ ಬಾಬಾಕ್ಡೆ ಫಾಟಿ ಪರ್ತುನ್ ಜಾವ್ಕ್ ನಾ, ಖರೆ ಜಾ ಅನಿ ಮಾಜ್ಯಾ ಭಾವಾಕ್ನಿ ಮಿಯಾ ಮಾಜ್ಯಾ ಬಾಬಾ ಅನಿ ತುಮ್ಚ್ಯಾ ಬಾಬಾಕ್ಡೆ, ಮಾಜ್ಯಾ ದೆವಾ ಅನಿ ತುಮ್ಚ್ಯಾ ದೆವಾಕ್ಡೆ ಪರ್ತುನ್ ಜಾವ್ಕ್ ಲಾಗ್ಲಾ ಮನುನ್ ಸಾಂಗ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:17
48 ತಿಳಿವುಗಳ ಹೋಲಿಕೆ  

ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು.


ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ಹಣದ ಚೀಲವನ್ನಾಗಲಿ ಹಸಿಬೆಯನ್ನಾಗಲಿ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಅವನು ನನ್ನೊಡನೆ - ನನ್ನ ತಂದೆಯೂ ದೇವರೂ ಆಶ್ರಯದುರ್ಗವೂ ನೀನೇ ಎಂದು ಹೇಳುವನು.


ಅನಂತರ ಅವರು - ಇದು ಶುಭವಾರ್ತೆಯ ದಿವಸವಾಗಿದೆ; ನಾವು ಇದನ್ನು ಪ್ರಕಟಿಸದಿರುವದು ಒಳ್ಳೇದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ ಎಂದು ಮಾತಾಡಿಕೊಂಡು


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆದರೆ ಸತ್ತವರು ಬದುಕಿ ಏಳುತ್ತಾರೆಂಬ ವಿಷಯದಲ್ಲಿ ಹೇಳಬೇಕಾದರೆ - ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ಮೋಶೆಗೆ ನುಡಿದದ್ದನ್ನು ನೀವು ಮೋಶೆಯ ಗ್ರಂಥದಲ್ಲಿ ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಓದಲಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು