Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:25 - ಕನ್ನಡ ಸತ್ಯವೇದವು J.V. (BSI)

25 ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಮನುನ್ ಹುರಲ್ಲ್ಯಾ ಶಿಸಾನಿ ತೆಕಾ,“ಅಮಿ ಧನಿಯಾಕ್ ಬಗಟ್ಲಾವ್” ಮನುನ್ ಸಾಂಗಟ್ಲ್ಯಾನಿ. ತನ್ನಾ ಥೊಮಸಾನ್,“ಮಿಯಾ ತ್ಯೆಚ್ಯಾ ಹಾತಾಂಚ್ಯಾ ವರ್ತಿ ಹೊತ್ತಿ ಮೊಳ್ಯಾಂಚಿ ವಳಕ್ ಬಗಟ್ಲ್ಯಾ ಶಿವಾಯ್ ಅನಿ ತ್ಯಾ ಮೊಳ್ಯಾಂಚ್ಯಾ ವಳ್ಕಿಯಾತ್ನಿ ಬೊಟ್ ಘಾಲುನ್ ಅನಿ ತ್ಯೆಚ್ಯಾ ಪಕ್ಡಿತ್ ಹಾತ್ ಘಾಲುನ್ ಬಗಟ್ಲ್ಯಾ ಶಿವಾಯ್ ವಿಶ್ವಾಸ್, ಕರಿನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:25
25 ತಿಳಿವುಗಳ ಹೋಲಿಕೆ  

ಅವರು ಆತನನ್ನು - ಹಾಗಾದರೆ ನಾವು ನೋಡಿ ನಿನ್ನ ಮಾತನ್ನು ನಂಬುವಂತೆ ಏನು ಸೂಚಕಕಾರ್ಯ ಮಾಡುತ್ತೀ?


ಆತನು ಬದುಕಿದ್ದಾನೆ, ನನಗೆ ಕಾಣಿಸಿಕೊಂಡನು ಎಂಬ ಮಾತನ್ನು ಕೇಳಿದಾಗ ಅವರು ನಂಬಲಿಲ್ಲ.


ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡುಕೊಂಡು ಅವನಿಗೆ - ಮೆಸ್ಸೀಯನು ನಮಗೆ ಸಿಕ್ಕಿದನು ಎಂದು ಹೇಳಿ


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.


ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆಹೋದರು.


ನಾನು ಕರೆಸಿದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಅವರು ಹೋಗಿ ಉಳಿದವರಿಗೆ ತಿಳಿಸಿದರು. ಆದರೆ ಅವರನ್ನೂ ನಂಬಲಿಲ್ಲ.


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು