Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:12 - ಕನ್ನಡ ಸತ್ಯವೇದವು J.V. (BSI)

12 ಯೇಸು ಅವರಿಗೆ - ಬಂದು ಊಟಮಾಡಿರಿ ಎಂದು ಹೇಳಿದನು. ಶಿಷ್ಯರು ಆತನನ್ನು ಸ್ವಾವಿುಯವರೆಂದು ತಿಳಿದಿದ್ದರಿಂದ ನೀನಾರೆಂದು ವಿಚಾರಿಸುವದಕ್ಕೆ ಅವರಲ್ಲಿ ಒಬ್ಬರೂ ಧೈರ್ಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ತೆಂಕಾ,“ಯೆವಾ ಅನಿ ಖಾವಾ” ಮಟ್ಲ್ಯಾನ್, ತೆಕಾ “ತಿಯಾ ಕೊನ್?” ಮನುನ್ ಇಚಾರುಕ್ ಶಿಸಾನಿತ್ಲ್ಯಾ ಕೊನಾಕ್ಬಿ ಧೈರೊ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೊ ಧನಿಚ್ ಮನುನ್ ತೆಂಕಾ ಕಳಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:12
9 ತಿಳಿವುಗಳ ಹೋಲಿಕೆ  

ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಪ್ರತ್ಯಕ್ಷನಾಗುವಂತೆ ಮಾಡಿದನು; ಆತನು ಎಲ್ಲರಿಗೆ ಪ್ರತ್ಯಕ್ಷನಾಗದೆ ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಅನ್ನಪಾನಗಳನ್ನು ತಕ್ಕೊಂಡೆವು.


ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ?


ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.


ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.


ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಒಬ್ಬ ಹೆಂಗಸಿನ ಸಂಗಡ ಮಾತಾಡುತ್ತಿರುವದನ್ನು ಕಂಡು ಆಶ್ಚರ್ಯಪಟ್ಟರು. ಆದರೂ - ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತಾಡುತ್ತೀ? ಎಂದು ಒಬ್ಬರೂ ಕೇಳಲಿಲ್ಲ.


ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.


ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಇನ್ನೇನಾದರೂ ಕೇಳುವದಕ್ಕೆ ಯಾರಿಗೂ ಧೈರ್ಯ ಹುಟ್ಟಲಿಲ್ಲ.


ಸೀಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ಭೂವಿುಗೆ ಎಳಕೊಂಡು ಬಂದನು. ಅದು ನೂರೈವತ್ತು ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆ ಹರಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು