Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:19 - ಕನ್ನಡ ಸತ್ಯವೇದವು J.V. (BSI)

19 ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 (ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆ ಸಾಂಗುನ್ ಜೆಜುನ್ ಪೆದ್ರು ದೆವಾಚ್ಯಾ ನಾವಾಕ್ ಮಹಿಮಾ ಹಾನುಕ್ ಮನುನ್ ಕಸ್ಲೆ ಮರಾನ್ ಮರ್‍ತಲೊ ಹಾಯ್ ಮನುನ್ ದಾಕ್ವುನ್ ದಿಲ್ಯಾನ್. ಮಾನಾ ಜೆಜುನ್ ತೆಕಾ,“ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:19
17 ತಿಳಿವುಗಳ ಹೋಲಿಕೆ  

ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು.


ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನ ಹಿಂದೆ ಬಂದ ಹೊರತು ನನಗೆ ಯೋಗ್ಯನಲ್ಲ.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಈ ಮಾತಿನಿಂದ ತಾನು ಇಂಥ ಸಾವು ಸಾಯತಕ್ಕವನೆಂದು ಸೂಚಿಸಿದನು.


ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ಇದರಿಂದ ಯೇಸು ತಾನು ಎಂಥಾ ಸಾವು ಸಾಯುವೆನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯೌವನಸ್ಥನಾಗಿದ್ದಾಗ ನೀನೇ ನಡುವನ್ನು ಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿಕೊಂಡು ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂಡು ಹೋಗುವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು