Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:17 - ಕನ್ನಡ ಸತ್ಯವೇದವು J.V. (BSI)

17 ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾನ್ ಅಪ್ನಾಚ್ಯಾ ಲೆಕಾಕ್ ಹ್ಯಾ ಜಗಾತ್ ಇಚಾರ್‍ನಿ ಕರುಕ್ ಮನುನ್ ಧಾಡುನ್ ದಿವ್ಕ್ ನಾ ಜಗಾಚೊ ರಾಕನ್ದಾರ್ ಹೊವ್‍ಸಾಟಿ ಮನುನ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:17
36 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ಜೀವ ಸ್ವರೂಪನಾದ ತಂದೆಯು ನನ್ನನ್ನು ಕಳುಹಿಸಿಕೊಟ್ಟಿರಲಾಗಿ ನಾನು ತಂದೆಯಿಂದ ಜೀವಿಸುತ್ತೇನೆ; ಅದರಂತೆ ನನ್ನನ್ನು ತಿನ್ನುವವನೇ ನನ್ನಿಂದ ಜೀವಿಸುವನು.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಯೇಸು - ದೇವರು ಮೆಚ್ಚುವ ಕೆಲಸ ಯಾವದಂದರೆ ಆತನು ಕಳುಹಿಸಿಕೊಟ್ಟವನನ್ನು ನೀವು ನಂಬುವದೇ ಅಂದನು.


ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.


ನಾನು ಆತನನ್ನು ಬಲ್ಲೆನು; ಆತನ ಕಡೆಯಿಂದ ಬಂದವನಾದದರಿಂದಲೂ ನನ್ನನ್ನು ಆತನೇ ಕಳುಹಿಸಿದ್ದರಿಂದಲೂ ಆತನನ್ನು ಬಲ್ಲೆನೆಂದು ಕೂಗಿ ಹೇಳಿದನು.


ನಾನು ತಂದೆಯ ಮುಂದೆ ನಿಮ್ಮ ಮೇಲೆ ತಪ್ಪುಹೊರಿಸುವೆನೆಂದು ನೆನಸಬೇಡಿರಿ; ನೀವು ಆಶ್ರಯಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ತಪ್ಪುಹೊರಿಸುವವನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.


ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡದ್ದೂ ಇಲ್ಲ; ಆತನು ಕಳುಹಿಸಿಕೊಟ್ಟವನ ಮಾತನ್ನು ನೀವು ನಂಬದೆ ಇದ್ದೀರಷ್ಟೆ.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಆಗ ಅವರೆಲ್ಲರು ಬೇರೆ ಹಳ್ಳಿಗೆ ಹೋದರು.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]


ನೀನು ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಂತೆ ನಾನೂ ಇವರನ್ನು ಲೋಕಕ್ಕೆ ಕಳುಹಿಸಿಕೊಟ್ಟೆನು.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು