Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:2 - ಕನ್ನಡ ಸತ್ಯವೇದವು J.V. (BSI)

2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಎಕ್ ದಿಸ್ ರಾಚ್ಚೆ ನಿಕೊದೆಮ್ ಜೆಜುಕ್ಡೆ ಗೆಲೊ, ಅನಿ ಜೆಜುಕ್, “ರಬ್ಬಿ ತಿಯಾ ದೆವಾನ್ ಧಾಡುನ್ ದಿಲ್ಲೊ ಎಕ್ ಗುರುಜಿ ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಫಾಟಿರ್ ರ್‍ಹಾಲ್ಯಾ ಶಿವಾಯ್ ಕೊನಾಕ್ಬಿ ತಿಯಾ ಕರ್‍ತೆ ತಸ್ಲಿ ಅಜಾಪಾ ಕರುಕ್ ಹೊಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:2
30 ತಿಳಿವುಗಳ ಹೋಲಿಕೆ  

ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.


ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ಯೇಸು ಹಿಂತಿರುಗಿ ಅವರು ತನ್ನ ಹಿಂದೆ ಬರುವದನ್ನು ಕಂಡು - ನಿಮಗೆ ಏನು ಬೇಕಾಗಿದೆ ಎಂದು ಕೇಳಲು ಅವರು - ರಬ್ಬಿಯೇ, ನೀನು ಇಳುಕೊಂಡಿರುವದು ಎಲ್ಲಿ? ಅಂದರು. (ರಬ್ಬಿ ಅಂದರೆ ಗುರು).


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.


ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ).


ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು


ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,


ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ.


ಆಗ ಆಕೆಯು ಅವನಿಗೆ - ನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು ಎಂದು ಹೇಳಿದಳು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸೆನು, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸೆನು ಎಂದು ರಹಸ್ಯವಾಗಿ ಪ್ರಮಾಣಮಾಡಲು


ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.


ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.


ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಅಷ್ಟರೊಳಗೆ ಶಿಷ್ಯರು - ಗುರುವೇ, ಊಟಮಾಡು ಎಂದು ಆತನನ್ನು ಬೇಡಿಕೊಂಡರು.


ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು.


ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು.


ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು