Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:8 - ಕನ್ನಡ ಸತ್ಯವೇದವು J.V. (BSI)

8 ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ವಾರೊ ಅಪ್ನಾಕ್ ಕಶೆ ಪಾಜೆ ತಶೆ ಖೆಳ್ತಾ ತೆಚೊ ಅವಾಜ್ ಎವ್ಡೊಚ್ ತುಕಾ ಆಯ್ಕೊ ಯೆತಾ, ಖರೆ ತೊ ಖೈತ್ನಾ ಯೆವ್ಲಾ, ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ತುಕಾ ಗೊತ್ತ್ ರ್‍ಹಾಯ್ನಾ ಅಸೆಚ್ ಸಗ್ಳಿ ಲೊಕಾ ಆತ್ಮ್ಯಾಚ್ಯಾ ವೈನಾ ಉಪಜ್ತಾತ್‍. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:8
21 ತಿಳಿವುಗಳ ಹೋಲಿಕೆ  

ಮನುಷ್ಯನ ಒಳಗಿನ ಆಲೋಚನೆಗಳು ಅವನಲ್ಲಿರುವ ಜೀವಾತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವದು? ಹಾಗೆಯೇ ದೇವರ ಆಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.


ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಈ ವರಗಳನ್ನೆಲ್ಲಾ ಆ ಒಬ್ಬ ಆತ್ಮನೇ ತನ್ನ ಚಿತ್ತಕ್ಕೆ ಬಂದ ಹಾಗೆ ಒಬ್ಬೊಬ್ಬನಿಗೆ ಹಂಚಿಕೊಟ್ಟು ನಡಿಸುತ್ತಾನೆ.


ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.


ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ ಅದರಲ್ಲಿ ತೆರೆಗಳನ್ನು ಎಬ್ಬಿಸಿತು.


ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಗಾಳಿಯು ತೆಂಕಣಕ್ಕೆ ಬೀಸಿ ಬಡಗಣಕ್ಕೆ ತಿರುಗುವದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವದು.


ನೀವು ಹೊಸದಾಗಿ ಹುಟ್ಟಬೇಕು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.


ಅದಕ್ಕೆ ನಿಕೊದೇಮನು - ಇದು ಆಗುವದು ಹೇಗೆ? ಅಂದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು