Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:23 - ಕನ್ನಡ ಸತ್ಯವೇದವು J.V. (BSI)

23 ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಎಳ್ ಯೆವ್ಲಾ, ಅನಿ ಖರೆಬಿ ತೊ ಎಳ್ ಯೆವ್ನ್ ಪಾವ್ಲಾ, ಆರಾದನ್ ಕರ್‍ತಲ್ಯಾ ಲೊಕಾನಿ ಬಾಬಾ ಹುಡಕ್ತಾ ದೆವಾಚ್ಯಾ ಆತ್ಮ್ಯಾನ್ ಅನಿ ಖರ್‍ಯಾಪಾನಾನಿ ಭರಲ್ಲಿ ಲೊಕಾ ಬಾಬಾಕ್ ತೊ ಕಸೊ ಹಾಯ್ ತಸೊಚ್ ತೆಚಿ ಅನಿ ತೆಕಾ ಖರೆಪಾನಾನಿ ಆರಾದನ್ ಕರ್‍ತಲಿ ಲೊಕಾಚ್ ಪಾಜೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:23
39 ತಿಳಿವುಗಳ ಹೋಲಿಕೆ  

ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.


ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ಯೇಸು ಆಕೆಗೆ - ಅಮ್ಮಾ, ನಾನು ಹೇಳುವ ಮಾತನ್ನು ನಂಬು; ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ ಈ ಬೆಟ್ಟಕ್ಕೂ ಹೋಗುವದಿಲ್ಲ, ಯೆರೂಸಲೇವಿುಗೂ ಹೋಗುವದಿಲ್ಲ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ಅದಕ್ಕೆ ಆಶ್ಚರ್ಯಪಡಬೇಡಿರಿ; ಸಮಾಧಿಗಳಲ್ಲಿರುವವರೆಲ್ಲರು ಆತನ ಧ್ವನಿಯನ್ನು ಕೇಳಿ


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು