Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:38 - ಕನ್ನಡ ಸತ್ಯವೇದವು J.V. (BSI)

38 ನೀವು ಕಷ್ಟಮಾಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು; ಬೇರೊಬ್ಬರು ಕಷ್ಟಮಾಡಿದ್ದಾರೆ; ನೀವು ನಡುವೆ ಅವರ ಕಷ್ಟದಲ್ಲಿ ಸೇರಿದ್ದೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನೀವು ದುಡಿಯದ ಎಡೆಯಲ್ಲಿ ಕೊಯ್ಲುಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ, ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನೀವು ಪ್ರಯಾಸ ಪಡದಂಥದ್ದನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಇತರರು ಪ್ರಯಾಸಪಟ್ಟರು. ನೀವು ಅವರ ಪ್ರಯಾಸದ ಫಲವನ್ನು ಪಡೆದಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಿಯಾ ಕಾಮ್ ಕರಿನಸಲ್ಲ್ಯಾ ಶೆತಾತ್ನಿ ಮಿಯಾ ತುಕಾ ಪಿಕ್ ಕಾತ್ರುಕ್ ಧಾಡ್ತಾ; ಥೈ ದುಸ್ರ್ಯಾನಿ ರಾಬ್ಲ್ಯಾನಾತ್ ಖರೆ ತೆಚೊ ಫಾಯ್ದೊ ತುಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:38
20 ತಿಳಿವುಗಳ ಹೋಲಿಕೆ  

ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.


ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ ಸಾವಕಾಶಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಇದ್ದರೂ


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಮತ್ತು ಇನ್ನು ಎಷ್ಟೋ ಮಂದಿ ಗಂಡಸರೂ ಹೆಂಗಸರೂ ಕರ್ತನಲ್ಲಿ ನಂಬಿಕೆಯಿಡುವವರಾಗಿ ಅವರ ಮಂಡಲಿಯಲ್ಲಿ ಸೇರಿಕೊಳ್ಳುತ್ತಿದ್ದರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ,


ಬಿತ್ತುವವನೊಬ್ಬ, ಕೊಯ್ಯುವವನೊಬ್ಬ ಎಂಬ ಗಾದೆಯಂತೆ ಆಯಿತು.


ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.


ನೀನು ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಂತೆ ನಾನೂ ಇವರನ್ನು ಲೋಕಕ್ಕೆ ಕಳುಹಿಸಿಕೊಟ್ಟೆನು.


ನಾವು ಮೇರೆದಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹಿಗ್ಗುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿಹೊಂದಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು