Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:53 - ಕನ್ನಡ ಸತ್ಯವೇದವು J.V. (BSI)

53 ಆಗ ನಿನ್ನ ಮಗನು ಬದುಕುತ್ತಾನೆಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದಾಯಿತೆಂದು ತಂದೆಯು ತಿಳುಕೊಂಡದರಿಂದ ಅವನೂ ಅವನ ಮನೆಯವರೆಲ್ಲರೂ ಆತನನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ‘ನಿನ್ನ ಮಗ ಬದುಕುತ್ತಾನೆ’ ಎಂದು ಯೇಸು ಹೇಳಿದ್ದ ಗಳಿಗೆಯಲ್ಲಿಯೇ ತನ್ನ ಮಗ ಬದುಕಿಕೊಂಡನೆಂದು ತಂದೆಗೆ ತಿಳಿಯಿತು. ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ವಿಶ್ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 “ನಿನ್ನ ಮಗನು ಬದುಕುವನು” ಎಂದು ಯೇಸು ಹೇಳಿದ್ದು ಇದೇ ಹೊತ್ತಿನಲ್ಲಿ ಎಂಬುದು ತಂದೆಗೆ ತಿಳಿದಿತ್ತು. ಆದ್ದರಿಂದ ಅವನು ಮತ್ತು ಅವನ ಮನೆಯವರೆಲ್ಲ ಯೇಸುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಹೀಗೆ, “ನಿನ್ನ ಮಗನು ಬದುಕುವನು” ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತನ್ನಾ ತ್ಯಾ ಬಾಬಾಕ್ ಜೆಜುನ್,“ತುಜೊ ಲೆಕ್ ಬರೊ ಹೊತಾ”, ಮನುನ್ ಸಾಂಗಲ್ಲೊ ತೊಚ್ ಎಳ್ ತೊ ಮನುನ್ ಯಾದ್ ಯೆಲಿ, ಅಶೆ ತೆನಿ, ಅನಿ ತೆಚ್ಯಾ ಕುಟ್ಮಾಚ್ಯಾ ಸಗ್ಳ್ಯಾನಿ ಜೆಜುಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:53
12 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶಿಕನಲ್ಲವೇ.


ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.


ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.


ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಎಷ್ಟು ಘಂಟೆಗೆ ಅವನಿಗೆ ರೋಗವು ಇಳಿತರವಾಯಿತೆಂದು ಅವನು ಅವರನ್ನು ಕೇಳಿದಾಗ ಅವರು - ನಿನ್ನೆ ಮಧ್ಯಾಹ್ನದ ಒಂದು ಗಂಟೆಗೆ ಜ್ವರವು ಅವನನ್ನು ಬಿಟ್ಟಿತು ಅಂದರು.


ಅವನು ಇನ್ನೂ ಘಟ್ಟಾಯಿಳಿದು ಹೋಗುತ್ತಿರುವಲ್ಲಿ ಅವನ ಆಳುಗಳು ಅವನೆದುರಿಗೆ ಬಂದು - ನಿನ್ನ ಮಗನು ಬದುಕಿಕೊಂಡನು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು