Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:26 - ಕನ್ನಡ ಸತ್ಯವೇದವು J.V. (BSI)

26 ತಂದೆಯು ತಾನು ಹೇಗೆ ಸ್ವತಃಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃಜೀವವುಳ್ಳವನಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶೆ ಬಾಬಾ ಜಿವಾಚೊ ಮುಳ್ ತಸೆಚ್ ತೆನಿ ಅಪ್ನಾಚ್ಯಾ ಲೆಕಾಕ್‍ಬಿ ಜಿವಾಚೊ ಮುಳ್ ಕರುನ್ ಥವ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:26
26 ತಿಳಿವುಗಳ ಹೋಲಿಕೆ  

ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು.


ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಮೊದಲನೆಯ ಮನುಷ್ಯನಾದ ಆದಾಮನು ಬದುಕುವ ಪ್ರಾಣಿಯಾದನೆಂದು ಬರೆದದೆಯಲ್ಲಾ. ಕಡೇ ಆದಾಮನೋ ಬದುಕಿಸುವ ಆತ್ಮನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಜೀವ ಸ್ವರೂಪನಾದ ತಂದೆಯು ನನ್ನನ್ನು ಕಳುಹಿಸಿಕೊಟ್ಟಿರಲಾಗಿ ನಾನು ತಂದೆಯಿಂದ ಜೀವಿಸುತ್ತೇನೆ; ಅದರಂತೆ ನನ್ನನ್ನು ತಿನ್ನುವವನೇ ನನ್ನಿಂದ ಜೀವಿಸುವನು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.


ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು;


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು