Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:34 - ಕನ್ನಡ ಸತ್ಯವೇದವು J.V. (BSI)

34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಮಾಜೆ ವಿಶಯಾತ್ ಎಕ್ ಮಾನ್ಸಾಚಿ ಸಾಕ್ಷಿ ಪಾಜೆಚ್ ಮನುನ್ ನಾ, ಖರೆ ತುಮಿ ನಾಸಾತ್ನಾ ಹುರುಕ್ ಪಾಜೆ ಮಟಲ್ಲ್ಯಾಸಾಟಿ ಮಿಯಾ ಹೆ ಸಾಂಗುಲಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:34
16 ತಿಳಿವುಗಳ ಹೋಲಿಕೆ  

ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುತ್ತೇವಲ್ಲಾ; ದೇವರ ಸಾಕ್ಷಿಯು ಅದಕ್ಕಿಂತ ವಿಶೇಷವಾಗಿದೆ. ದೇವರು ಕೊಟ್ಟ ಸಾಕ್ಷಿ ಏನಂದರೆ ಆತನು ತನ್ನ ಮಗನ ವಿಷಯದಲ್ಲಿ ಹೇಳಿದ್ದೇ.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಬಲವಿಲ್ಲದವರನ್ನು ಸಂಪಾದಿಸುವದಕ್ಕೆ ಅವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾಗಿದ್ದೇನೆ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;


ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ.


ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು - ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತಾಡುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನೆಂದು ಹೇಳುತ್ತಾನೆ.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ನನ್ನ ವಿಷಯವಾಗಿ ಸಾಕ್ಷಿಹೇಳುವವನು ಮತ್ತೊಬ್ಬನಿದ್ದಾನೆ; ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿ ನಿಜವೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು