Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:15 - ಕನ್ನಡ ಸತ್ಯವೇದವು J.V. (BSI)

15 ಆಗ ಯೇಸು - ಅವರು ಬಂದು ತನ್ನನ್ನು ಹಿಡುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂಬ ಯೋಚನೆಯಲ್ಲಿದ್ದಾರೆಂದು ತಿಳಿದುಕೊಂಡು ತಿರಿಗಿ ತಾನೊಬ್ಬನೇ ಒಂಟಿಗನಾಗಿ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾ ಬಳ್‍ ಜಬ್ಬರಾನ್ ಮಾಕಾ ರಾಜಾ ಕರುಕ್ ಮನುನ್ ಯೆತಾತ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆ ಮನುನ್ ಜೆಜು ಅನಿ ಪರ್ತುನ್ ಮಡ್ಡಿ ವರ್ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:15
14 ತಿಳಿವುಗಳ ಹೋಲಿಕೆ  

ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.


ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.


ಆತನ ಹಿಂದೆಯೂ ಮುಂದೆಯೂ ಹೋಗುತ್ತಿದ್ದವರು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.


ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರ ಸಂಗಡ ಕೂತುಕೊಂಡನು.


ಆತನು ಆ ಜನರ ಗುಂಪುಗಳನ್ನು ಕಂಡು ಬೆಟ್ಟವನ್ನೇರಿ ಕೂತುಕೊಂಡ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.


ಮರುದಿವಸ ಸಮುದ್ರದ ಆಚೇಕಡೆಯಲ್ಲಿ ನಿಂತುಕೊಂಡಿದ್ದ ಜನರು ಯೇಸುವನ್ನು ಹುಡುಕುತ್ತಿದ್ದರು; ಇಲ್ಲಿ ಒಂದೇ ಹಡಗು ಇದ್ದ ಹೊರತು ಬೇರೆ ದೋಣಿಯು ಇರಲಿಲ್ಲವೆಂದೂ ಶಿಷ್ಯರು ಮಾತ್ರ ಹೊರಟು ಹೋದದ್ದಲ್ಲದೆ ಯೇಸು ತನ್ನ ಶಿಷ್ಯರ ಸಂಗಡ ಆ ಹಡಗನ್ನು ಹತ್ತಲಿಲ್ಲವೆಂದೂ ಅವರಿಗೆ ತಿಳಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು