Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:71 - ಕನ್ನಡ ಸತ್ಯವೇದವು J.V. (BSI)

71 ಈ ಮಾತಿನಿಂದ ಆತನು ಸೀಮೋನನ ಮಗನಾದ ಇಸ್ಕರಿಯೋತ ಯೂದನನ್ನು ಸೂಚಿಸಿದನು. ಇವನು ಆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು ಮುಂದೆ ಆತನನ್ನು ಹಿಡುಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

71 ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

71 ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

71 ತೊ ಸಿಮಾವ್ ಇಸ್ಕರಿಯೊತಾಚ್ಯಾ ಲೆಕಾ ಜುದಾಸಾಚ್ಯಾ ವಿಶಯಾತ್ ಬೊಲುಲಾಗಲ್ಲೊ, ತೊ ತ್ಯಾ ಬಾರಾ ಜಾನಾ ಶಿಸಾನಿತ್ಲೊ ಹೊಲ್ಯಾರ್ಬಿ ತೆಕಾ ಘಾತ್ ಕರ್‍ನಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:71
19 ತಿಳಿವುಗಳ ಹೋಲಿಕೆ  

ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಅದಕ್ಕೆ ಯೇಸು - ನಾನು ಈ ತುತ್ತನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ ಎಂದು ಹೇಳಿ ಆ ತುತ್ತನ್ನು ಅದ್ದಿ ತೆಗೆದು ಸೀಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.


ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಆತನು ಕಳುಹಿಸಿಕೊಟ್ಟ ಅಪೊಸ್ತಲರೆಂಬ ಹನ್ನೆರಡು ಮಂದಿಯ ಹೆಸರುಗಳು ಯಾವವಂದರೆ - ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನ, ಅವನ ತಮ್ಮನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ತಮ್ಮನಾದ ಯೋಹಾನ,


ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವುಗಳೇ.


ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮಹಾಯಾಜಕರಿಗೆ ಹಿಡುಕೊಡಬೇಕೆಂತ ಅವರ ಬಳಿಗೆ ಹೋದನು.


ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.


ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು.


ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.


ಆದರೆ ಆತನ ಶಿಷ್ಯರಲ್ಲಿ ಒಬ್ಬನು, ಅಂದರೆ ಆತನನ್ನು ಹಿಡುಕೊಡುವದಕ್ಕಿದ್ದ ಇಸ್ಕರಿಯೋತ ಯೂದನೆಂಬವನು -


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರೊಳಗೆ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಸಂಗಡ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು