Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:15 - ಕನ್ನಡ ಸತ್ಯವೇದವು J.V. (BSI)

15 ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜುದೆವಾಂಚೆ ಅದಿಕಾರಿ ಲೈ ಅಜಾಪ್ ಹೊಲೆ, ಅನಿ “ಹ್ಯೊ ಮಾನುಸ್ ಶಿಕುಕ್‍ನಾ ನಾ ಕಾಯ್ ನಾ, ಎವ್ಡೆ ಸಗ್ಳೆ ಹೆಕಾ ಕಶೆ ಗೊತ್ತ್ ಹಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:15
18 ತಿಳಿವುಗಳ ಹೋಲಿಕೆ  

ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ತರುವಾಯ ಆತನು ತನ್ನ ಊರಿಗೆ ಬಂದು ಅಲ್ಲಿರುವ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ - ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು.


ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು.


ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.


ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟುಹೋದರು.


ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ


ಜನರು ಅದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು.


ಅವನು ಪರವಶನಾಗಿ ಮಾತಾಡುವದನ್ನು ಗುರುತಿನವರು ಕಂಡು ತಮ್ಮ ತಮ್ಮೊಳಗೆ - ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂದು ಮಾತಾಡಿಕೊಳ್ಳುತ್ತಿರುವಾಗ


ಜಾತ್ರೆಯಲ್ಲಿ ಯೆಹೂದ್ಯರು - ಅವನು ಎಲ್ಲಿದ್ದಾನೆಂದು ಆತನನ್ನು ಹುಡುಕುತ್ತಿದ್ದರು.


ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಅಕ್ಷರವಿಲ್ಲದವನಿಗೆ - ದಯವಿಟ್ಟು ಓದೆಂದು ಒಪ್ಪಿಸಿದರೆ ಅವನು - ನನಗೆ ವಿದ್ಯೆಯಿಲ್ಲ ಅನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು