Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:30 - ಕನ್ನಡ ಸತ್ಯವೇದವು J.V. (BSI)

30 ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತೆನಿ ತೆಕಾ ಧರುಕ್ ಬಗಟ್ಲ್ಯಾನಿ, ಖರೆ ಕೊನಾಕ್ಬಿ ತೆಕಾ ಹಾತ್ ಲಾವುಕ್ ಹೊವುಕ್ನಾ, ಕಶ್ಯಾಕ್ ಮಟ್ಲ್ಯಾರ್ ಅಜುನ್ ತೆಚೊ ಎಳ್ ಯೆವ್ಕ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:30
22 ತಿಳಿವುಗಳ ಹೋಲಿಕೆ  

ಅವರು ತಿರಿಗಿ ಆತನನ್ನು ಹಿಡಿಯುವದಕ್ಕೆ ನೋಡಿದರು; ಆದರೆ ಅವರ ಕೈಗೆ ತಪ್ಪಿಸಿಕೊಂಡು ಹೋದನು.


ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.


ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ಜನರು ಆತನ ವಿಷಯವಾಗಿ ಗುಜುಗುಜು ಆಡಿದ ಈ ಮಾತುಗಳನ್ನು ಫರಿಸಾಯರು ಕೇಳಲು ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯುವದಕ್ಕೆ ಓಲೇಕಾರರನ್ನು ಕಳುಹಿಸಿದರು.


ಆದರೆ ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯಬೇಕೆಂಬದಾಗಿ ಯೋಚಿಸಿ - ಅವನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.


ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು.


ನೀವು ಅಬ್ರಹಾಮನ ಸಂತಾನದವರು ನಿಜ; ಆದರೂ ನನ್ನ ವಾಕ್ಯವು ನಿಮ್ಮಲ್ಲಿ ಸಾಗದೆ ಇರುವ ಕಾರಣ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟಿದ್ದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯುವದಿಲ್ಲವಲ್ಲಾ; ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ? ಎಂದು ಹೇಳಿದನು.


ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು.


ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.


ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.


ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ಆದರೆ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೂದ್ಯರು ಆತನನ್ನು ಹೊಡೆದು ಕೊಲ್ಲಬೇಕೆಂದು ತಿರಿಗಿ ಕಲ್ಲುಗಳನ್ನು ತೆಗೆದುಕೊಂಡು ಬರಲು


ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು