Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:42 - ಕನ್ನಡ ಸತ್ಯವೇದವು J.V. (BSI)

42 ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಪವಿತ್ರ್ ಪುಸ್ತಕ್ ಮನ್ತಾ “ಮೆಸ್ಸಿಯಾ ದಾವಿದ್ ರಾಜಾಚ್ಯಾ ಘರಾನ್ಯಾಚೊ ಅನಿ ತೊ ದಾವಿದಾನ್ ಜಿವನ್ ಕರಲ್ಲ್ಯಾ ಬೆತ್ಲೆಹೆಮಾತ್ ಉಪಾಜ್ತಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:42
17 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಅವರು ಅವನಿಗೆ - ಯೂದಾಯದ ಬೇತ್ಲೆಹೇವಿುನಲ್ಲಿಯೇ; ಯಾಕಂದರೆ -


ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಒಡಂಬಡಿಕೆಮಾಡಿಕೊಂಡು ಆಣೆಯಿಟ್ಟು - ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ ಎಂಬದೇ. ಸೆಲಾ.


ಸೇವಕರಲ್ಲೊಬ್ಬನು ಅವನಿಗೆ - ಬೇತ್ಲೆಹೇವಿುನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲವನೂ ಪರಾಕ್ರಮಶಾಲಿಯೂ ರಣಶೂರನೂ ವಾಕ್ಚತುರನೂ ಸುಂದರನೂ ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆಂದು ತಿಳಿಸಿದನು.


ಆದರೂ ಇವನು ಎಲ್ಲಿಯವನೆಂದು ಬಲ್ಲೆವು; ಕ್ರಿಸ್ತನು ಬರುವಾಗ ಅವನು ಎಲ್ಲಿಯವನೋ ಒಬ್ಬರಿಗೂ ತಿಳಿಯುವದಿಲ್ಲವೆಂದು ಮಾತಾಡಿಕೊಳ್ಳುತ್ತಿದ್ದರು.


ಸೌಲನು ಅವನನ್ನು - ಹುಡುಗನೇ, ನೀನು ಯಾರ ಮಗನೆಂದು ಕೇಳಿದ್ದಕ್ಕೆ ಅವನು - ನಾನು ಬೇತ್ಲೆಹೇವಿುನವನೂ ನಿನ್ನ ಸೇವಕನೂ ಆದ ಇಷಯನ ಮಗನು ಎಂದು ಉತ್ತರಕೊಟ್ಟನು.


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇವಿುಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ ಎಂದು ಕೇಳಲು ಅವನು -


ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ಬೇತ್ಗಾದೇರಿನವರ ಮೂಲಪುರುಷನಾದ ಹಾರೇಫ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು