Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:20 - ಕನ್ನಡ ಸತ್ಯವೇದವು J.V. (BSI)

20 ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜು ದೆವಾಚ್ಯಾ ಗುಡಿತ್ ಹಿ ಸಗ್ಳಿ ಗೊಸ್ಟಿಯಾ ಶಿಕ್ವುತಾನಾ ಕಾನಿಕಾಚೆ ಡಬ್ಬೆ ಥವಲ್ಲ್ಯಾ ಖೊಲಿತ್ ಹೊತ್ತೊ ಖರೆ ಕೊನ್ ಬಿ ತೆಕಾ ಧರುಕ್ ನಾತ್. ಕಶ್ಯಾಕ್ ಮಟ್ಲ್ಯಾರ್ ತೆಚೊ ಎಳ್ ಅಜುನ್ ಯೆವ್ನಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:20
17 ತಿಳಿವುಗಳ ಹೋಲಿಕೆ  

ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು.


ಯೇಸು ಬೊಕ್ಕಸದ ಮನೆಗೆ ಎದುರಾಗಿ ಕೂತುಕೊಂಡು ಜನರು ಬೊಕ್ಕಸದಲ್ಲಿ ಹಣ ಹಾಕುವದನ್ನು ನೋಡುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಬಹಳ ಬಹಳ ಹಾಕುತ್ತಿರಲು


ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರೂ ಒಬ್ಬರೂ ಆತನ ಮೇಲೆ ಕೈಹಾಕಲಿಲ್ಲ.


ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ನಿಮಗೆ ನಿಜವಾಗಿ ಹೇಳುತ್ತೇನೆ, ಬೊಕ್ಕಸದಲ್ಲಿ ಹಾಕಿದವರೆಲ್ಲರಲ್ಲಿ ಈ ಬಡ ವಿಧವೆ ಹೆಚ್ಚು ಹಾಕಿದ್ದಾಳೆ.


ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು.


ಅವರು ತಿರಿಗಿ ಆತನನ್ನು ಹಿಡಿಯುವದಕ್ಕೆ ನೋಡಿದರು; ಆದರೆ ಅವರ ಕೈಗೆ ತಪ್ಪಿಸಿಕೊಂಡು ಹೋದನು.


ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು.


ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.


ಲೇವಿಯರಾದ ಮೇಲ್ಕಂಡ ನಾಲ್ಕು ಮಂದಿ ದ್ವಾರಪಾಲಕ ಮುಖ್ಯಸ್ಥರು ಜವಾಬುದಾರರಾಗಿದ್ದು ದೇವಾಲಯದ ಕೋಣೆಗಳನ್ನೂ ಭಂಡಾರಗಳನ್ನೂ ನೋಡಿಕೊಳ್ಳುವವರಾಗಿದ್ದರು.


ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;


ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಕಂಡನು.


ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು


ಜಾತ್ರೆಯ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸುತ್ತಿದ್ದನು.


ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು