Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:21 - ಕನ್ನಡ ಸತ್ಯವೇದವು J.V. (BSI)

21 ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜು ತೆಂಕಾ ಅನಿ ಪರ್ತುನ್, “ಮಿಯಾ ಭಾಯ್ರ್ ಪಡುನ್ ಜಾತಾ ಖರೆ ತುಮಿ ಮಾಕಾ ಹುಡಕ್ತ್ಯಾಶಿ. ಖರೆ ತುಮ್ಚ್ಯಾ ಪಾಪಾತುಚ್ ತುಮಿ ಮರ್‍ತ್ಯಾಶಿ. ಮಿಯಾ ಜಾತಾ ಥೈ ತುಮ್ಚ್ಯಾನ್ ಜಾವ್ಕ್ ಹೊಯ್ನಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:21
21 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಅಂದನು.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ಈ ಮಾತಿನಿಂದ ತಾನು ಇಂಥ ಸಾವು ಸಾಯತಕ್ಕವನೆಂದು ಸೂಚಿಸಿದನು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಈಗಿನಿಂದ - ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.


ಕೆಲವು ದಿವಸ ಮಾತ್ರ ಬದುಕತಕ್ಕ ಕೂಸಾಗಲಿ ವಯಸ್ಸಾಗದೆ ಮುದುಕನಾದವನಾಗಲಿ ಅಲ್ಲಿ ಇರುವದಿಲ್ಲ; ಯುವಕನು ನೂರು ವರುಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರುಷದೊಳಗೆ ಶಾಪತಗಲದು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವದು; ಬಲದ ಮೇಲಣ ನಂಬಿಕೆಯು ಬಿದ್ದುಹೋಗುವದು.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ ಅದು ಅವನೊಂದಿಗೆ ಧೂಳಿನಲ್ಲಿ ಮಲಗುವದು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು.


ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಎಂದು ಅವನು ಹೇಳಿದ ಮಾತು ಏನಿದ್ದೀತು? ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು