Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:32 - ಕನ್ನಡ ಸತ್ಯವೇದವು J.V. (BSI)

32 ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತುಮ್ಕಾ, ಖರೆ ಕಾಯ್ ಮನುನ್ ಗೊತ್ತ್ ಹೊತಾ, ಅನಿ ತೆಚ್ ಖರೆ ತುಮ್ಕಾ ಸ್ವತಂತ್ರ್ ಕರ್‍ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:32
42 ತಿಳಿವುಗಳ ಹೋಲಿಕೆ  

ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು.


ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.


ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ನೀವು ಬಿಡುಗಡೆಯನ್ನುಂಟುಮಾಡುವ ಧರ್ಮಪ್ರಮಾಣದ ಪ್ರಕಾರ ತೀರ್ಮಾನವನ್ನು ಹೊಂದತಕ್ಕವರೆಂದು ಮಾತಾಡಿರಿ, ನಡೆಯಿರಿ.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದ್ದರಿಂದ ಆಟಂಕವಿಲ್ಲದೆ ನಡೆಯುವೆನು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.


ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವದು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಯಾವನು ಮತ್ತೊಬ್ಬನ ದಾಸನಾಗಿದ್ದು ಕರ್ತನ ಸೇವೆಗೆ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನು. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ಸಭೆಯ ಹಿರಿಯನು ದೇವರಾದುಕೊಂಡವರಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವದೇನಂದರೆ - ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲವೂ ನಮ್ಮೊಂದಿಗಿರುವಂಥ ಸತ್ಯದ ನಿವಿುತ್ತ ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.


ಆಗ ಅವನನ್ನೂ ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವಾಸ್ತ್ಯಕ್ಕೂ ಹೋಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು