Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:48 - ಕನ್ನಡ ಸತ್ಯವೇದವು J.V. (BSI)

48 ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಜುದೆವಾನಿ ಜೆಜುಕ್ ಸಾಂಗಲ್ಲ್ಯಾನಿ, “ತಿಯಾ ಸಮಾರಿಯಾಚೊ ಮಾನುಸ್ ಹೊಯ್ ಕಾಯ್ ನ್ಹಯ್?” ಅನಿ ತುಕಾ ಗಿರೊ ಲಾಗ್ಲಾ ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:48
18 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಜನರು - ನಿನಗೆ ದೆವ್ವ ಹಿಡಿದದೆ; ಯಾರು ನಿನ್ನನ್ನು ಕೊಲ್ಲುವದಕ್ಕೆ ನೋಡುತ್ತಾರೆ? ಅಂದರು.


ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.


ಅವರಲ್ಲಿ ಅನೇಕರು - ಅವನಿಗೆ ದೆವ್ವಹಿಡಿದದೆ, ಹುಚ್ಚುಹಿಡಿದದೆ, ಯಾಕೆ ಅವನ ಮಾತು ಕೇಳುತ್ತೀರಿ? ಅಂದರು.


ಯೆಹೂದ್ಯರಿಗೂ ಸಮಾರ್ಯರಿಗೂ ಬಳಕೆಯಿಲ್ಲದಿರಲಾಗಿ ಆ ಸಮಾರ್ಯದವಳು ಆತನಿಗೆ - ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ನೀರು ಬೇಡುವದು ಹೇಗೆ ಎಂದು ಹೇಳಿದಳು.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ -


ಆದರೆ ಫರಿಸಾಯರು ಅದನ್ನು ಕೇಳಿ - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೇ ಹೊರತು ಬೇರೆ ರೀತಿಯಿಂದ ಬಿಡಿಸುವದಿಲ್ಲ ಅಂದರು.


ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.


ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;


ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


ನೀವು ನನ್ನನ್ನು ಗುರುವೆಂದೂ ಕರ್ತನೆಂದೂ ಕರೆಯುತ್ತೀರಿ; ನೀವು ಕರೆಯುವದು ಸರಿ; ನಾನು ಅಂಥವನೇ ಹೌದು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಆದದರಿಂದ ನಾವು ಆತನ ನಿವಿುತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೋಣ.


ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ.


ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ.


ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ


ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು