Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:51 - ಕನ್ನಡ ಸತ್ಯವೇದವು J.V. (BSI)

51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ ಜೊ ಕೊನ್ ಮಾಜ್ಯಾ ಶಿಕ್ವುತಲ್ಯಾಕ್ ಖಾಲ್ತಿ ಹೊವ್ನ್ ಚಲ್ತಾತ್ ತೊ ಕನ್ನಾಚ್ ಮರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:51
15 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.


ಪರಲೋಕದಿಂದ ಇಳಿದುಬರುವ ರೊಟ್ಟಿ ಎಂಥದಂದರೆ ಅದನ್ನು ತಿಂದವನು ಸಾಯುವದಿಲ್ಲ.


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ಹನೋಕನು ಮರಣವನ್ನು ಅನುಭವಿಸದೆ ಒಯ್ಯಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರಿಗೆ ಮೆಚ್ಚಿಕೆಯಾದವನಾಗಿದ್ದನೆಂದು ಸಾಕ್ಷಿ ಉಂಟು.


ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.


ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು