Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:29 - ಕನ್ನಡ ಸತ್ಯವೇದವು J.V. (BSI)

29 ಮೋಶೆಯ ಸಂಗಡ ದೇವರು ಮಾತಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ಅರಿಯೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯ ಮೂಲಕ ದೇವರು ಮಾತನಾಡಿದನೆಂದು ನಾವು ಬಲ್ಲೆವು. ಆದರೆ ಈತನು ಎಲ್ಲಿಂದ ಬಂದನೋ ನಮಗೆ ಗೊತ್ತಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದೆವಾನ್ ಮೊಯ್ಜೆಕ್ಡೆ ಬೊಲ್ಲ್ಯಾನ್, ತೆ ಅಮ್ಕಾ ಗೊತ್ತ್ ಹಾಯ್, ಖರೆ ಹ್ಯೊ ಖೈತ್ನಾ ಯೆಲಾ ಅನಿ ಕೊನ್ ಮನುನ್ ಅಮ್ಕಾ ಗೊತ್ತ್ ನಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:29
28 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.


ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.


ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.


ಆದರೂ ಇವನು ಎಲ್ಲಿಯವನೆಂದು ಬಲ್ಲೆವು; ಕ್ರಿಸ್ತನು ಬರುವಾಗ ಅವನು ಎಲ್ಲಿಯವನೋ ಒಬ್ಬರಿಗೂ ತಿಳಿಯುವದಿಲ್ಲವೆಂದು ಮಾತಾಡಿಕೊಳ್ಳುತ್ತಿದ್ದರು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು;


ಆದರೆ ಫರಿಸಾಯರು ಅದನ್ನು ಕೇಳಿ - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೇ ಹೊರತು ಬೇರೆ ರೀತಿಯಿಂದ ಬಿಡಿಸುವದಿಲ್ಲ ಅಂದರು.


ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಮೋಶೆಗೆ ನೇವಿುಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು


ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.


ಆತನು ಮೋಶೆಗೆ ತನ್ನ ಮಾರ್ಗವನ್ನೂ ಇಸ್ರಾಯೇಲ್ಯರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಯೇಹುವು ತಿರಿಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು - ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ ಎಂದು ಕೇಳಿದರು. ಅದಕ್ಕೆ ಅವನು - ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬದು ನಿಮಗೆ ಗೊತ್ತುಂಟಲ್ಲಾ ಎಂದು ಉತ್ತರಕೊಟ್ಟನು.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಬಳಿಕೆಯಾಗಿದ್ದನು.


ಆಗ ಮೋಶೆ ಜನರಿಗೆ - ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಇವುಗಳನ್ನು ನಡಿಸುವದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳುಕೊಳ್ಳುವದು ಹೇಗಂದರೆ -


ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.


ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ.


ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು