Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:34 - ಕನ್ನಡ ಸತ್ಯವೇದವು J.V. (BSI)

34 ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ತೆನಿ, “ತಿಯಾ ಪಾಪಾತ್ ಉಪ್ಜುನ್, ಪಾಪಾತುಚ್ ಮೊಟೊ ಹೊಲ್ಲೊ, ಅಮ್ಕಾಚ್ ಶಿಕ್ವುಕ್ ಯೆತೆಯ್?” ಮನುನ್ ಜಬಾಬ್ ದಿಲ್ಯಾನಿ, ಅನಿ ತೆಕಾ ಸಿನಾಗೊಗಾತ್ನಾ ಭಾಯ್ರ್ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:34
34 ತಿಳಿವುಗಳ ಹೋಲಿಕೆ  

ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.


ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಅಂದನು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವದು ಹೇಗೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವದು ಸಾಧ್ಯವೋ?


ದಾರಿ ಬಿಡು ಎಂದು ಹೇಳಿ - ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯ ಹೇಳುವವನಾಗಬೇಕೋ; ಆ ಮನುಷ್ಯರಿಗೆ ಕೇಡು ಮಾಡುವದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ಇರುಕಿಸಿ ಕದವನ್ನು ಒಡೆದು ಬಿಡಬೇಕೆಂದಿದ್ದರು.


ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ. ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ.


ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳ ವಿಷಯದಲ್ಲಿ ಎಲ್ಲರಿಗೂ ನೆನಪುಕೊಡುವೆನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ;


ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಇದನ್ನು ಆತನ ಸಂಗಡ ಇದ್ದ ಫರಿಸಾಯರು ಕೇಳಿ - ನಾವೂ ಕುರುಡರೇನು? ಎಂದು ಕೇಳಿದಾಗ


ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು - ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ ಎಂದು ಕೇಳಿದನು.


ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.


ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಆತನಿಗೆ - ಬೋಧಕನೇ, ಈ ಮಾತುಗಳನ್ನು ಹೇಳುವದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು ಎಂದು ಹೇಳಲು


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವದು; ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವದು.


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.


ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ತಾನು ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೇ ನಡತೆಯನ್ನು ಅನುಸರಿಸು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು