Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:10 - ಕನ್ನಡ ಸತ್ಯವೇದವು J.V. (BSI)

10 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ - ಪರದೇಶಿಯಾದ ನನ್ನಲ್ಲಿ ಇಷ್ಟು ಕಟಾಕ್ಷವೇಕೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:10
19 ತಿಳಿವುಗಳ ಹೋಲಿಕೆ  

ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.


ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು.


ಕ್ರೈಸ್ತ ಸಹೋದರರು ಅಣ್ಣತಮ್ಮಂದಿರೆಂದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಲ್ಲಾ ನನ್ನನ್ನು ಧನ್ಯಳೆಂದು ಹೊಗಳುವರು.


ನನ್ನ ಸ್ವಾವಿುಯ ತಾಯಿಯು ನನ್ನ ಬಳಿಗೆ ಬರುವಷ್ಟು ಭಾಗ್ಯ ನನಗೆ ಎಲ್ಲಿಂದಾಯಿತು?


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನೀನು ಸತ್ತ ನಾಯಿಯಂತಿರುವ ನನ್ನನ್ನು ಲಕ್ಷಿಸುವ ಹಾಗೆ ನಿನ್ನ ದಾಸನಾದ ನಾನು ಎಷ್ಟರವನು ಅಂದನು.


ನಾನು ಹಸಿದಿದ್ದೆನು, ನನಗೆ ಊಟಕ್ಕೆ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನ್ನನ್ನು ಸೇರಿಸಿಕೊಂಡಿರಿ;


ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.


ಹೇಗಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನ ಎದುರಿನಲ್ಲಿ ಯಾರೋ ಮೂರು ಮಂದಿ ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವದಕ್ಕೆ ಅವನು ಗುಡಾರದ ಬಾಗಲಿನಿಂದ ಓಡಿ ಹೋಗಿ


ನನ್ನ ಆಳುಗಳು ಕೊಯ್ಯುವದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ದಾಹವಾದರೆ ನನ್ನ ಸೇವಕರೇ ನೀರು ತಂದು ತುಂಬಿಸಿದ ನೀರಿನ ಪಾತ್ರೆಗಳ ಬಳಿಗೆ ಹೋಗಿ ಕುಡಿ ಎಂದು ಹೇಳಿದನು.


ಬೋವಜನು - ನಿನ್ನ ಗಂಡನು ಸತ್ತ ಮೇಲೆ ನೀನು ಅತ್ತೆಯನ್ನು ಪ್ರೀತಿಸಿ ತಂದೆತಾಯಿಗಳನ್ನೂ ಸ್ವದೇಶವನ್ನೂ ಬಿಟ್ಟು ನೀನು ಈವರೆಗೂ ಅರಿಯದ ಜನರ ಬಳಿಗೆ ಬಂದಿರುವಿಯೆಂಬದು ನನಗೆ ಚೆನ್ನಾಗಿ ಗೊತ್ತಾಗಿದೆ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಅತ್ತೆಯು - ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ ಎನ್ನಲು ರೂತಳು - ನಾನು ಯಾವನ ಹೊಲದಲ್ಲಿ ಹಕ್ಕಲಾಯ್ದೆನೋ ಅವನ ಹೆಸರು ಬೋವಜನೆಂದು ತಿಳಿಸಿದಳು.


ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ಕರ್ತನೇ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದೀಯಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು