Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:16 - ಕನ್ನಡ ಸತ್ಯವೇದವು J.V. (BSI)

16 ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಾಕಾ ಪುರಾ ಆತ್ಮಿಕ್ ಬರೊಸೊ ಹಾಯ್; ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಅದ್ದಿ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಸಗ್ಳ್ಯಾಕ್ನಿಬಿ ಹುರ್ವುತಲೊ ದೆವಾಚೊ ಬಳ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:16
38 ತಿಳಿವುಗಳ ಹೋಲಿಕೆ  

ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ನಾನು ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


ಆದಕಾರಣ ಸಾರಿದ ವಾರ್ತೆಯು ನಂಬಿಕೆಗೆ ಆಧಾರ, ಆ ವಾರ್ತೆಗೆ ಕ್ರಿಸ್ತನ ವಾಕ್ಯವೇ ಆಧಾರ.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.


ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ.


ಕೆಟ್ಟದ್ದನ್ನು ನಡಿಸುವ ಪ್ರತಿಯೊಬ್ಬ ನರಪ್ರಾಣಿಗೆ ಕಷ್ಟವೂ ಸಂಕಟವೂ ಬರುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.


ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.


ಕ್ರಿಸ್ತನ ಸುವಾರ್ತೆಯನ್ನು ಸಾರುವದಕ್ಕಾಗಿ ನಾನು ತ್ರೋವಕ್ಕೆ ಬರಲು ಕರ್ತನ ಕೃಪೆಯಿಂದ ನನಗೆ ಒಳ್ಳೇ ಸಂದರ್ಭ ಉಂಟಾಯಿತು.


ಹಾಗಾದರೆ ನನಗಾಗುವ ಬಹುಮಾನವೇನು? ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನ ಮಾಡುವ ಹಕ್ಕನ್ನು ನಡಿಸದೆ ಅದನ್ನು ಉಚಿತಾರ್ಥವಾಗಿ ದಾನಮಾಡುವದೇ ನನಗೆ ಬಹುಮಾನ.


ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ವರಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.


ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು