Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:28 - ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶ್ಯಾಕ್ ಮಟ್ಲ್ಯಾರ್, ತ್ಯಾ ಲೊಕಾನಿ ದೆವಾಚ್ಯಾ ವಿಶಯಾತ್ ಹೊತ್ತಿ ಖರಿ ಬುದ್ದ್ ಅಪ್ನಾಂಚ್ಯಾ ಮನಾತ್ನಿ ಥವ್ನ್ ಘೆವ್ಕ್ ಇನ್ಕಾರ್ ಕರ್‍ಲ್ಯಾನಾತ್, ದೆವಾನ್ ತೆಂಕಾ ತೆಂಚ್ಯಾ ಪೊಜ್ಡ್ಯಾ ಚಾಲಿಚ್ಯಾ ತಾಬೆತ್ ಸೊಡುನ್ ಸೊಡ್ಲ್ಯಾನಾಯ್. ತಸೆಮನುನ್ ತೆನಿ ನಕ್ಕೊ ಹೊಲ್ಲಿ ಬುರ್ಶಿ ಕಾಮಾ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:28
33 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ನಿಮ್ಮ ನಿವಾಸವು ಮೋಸದೊಳಗೇ ಇದೆ; ಅಯ್ಯೋ, ಮೋಸಗಾರರಾಗಿರುವದರಿಂದ ನನ್ನನ್ನು ಅರಿಯಲೊಲ್ಲರು ಎಂದು ಯೆಹೋವನು ಅನ್ನುತ್ತಾನೆ.


ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ನಡತೆಗೆ ಒಪ್ಪಿಸಿದನು.


ಯನ್ನ ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಆ ಮನುಷ್ಯರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಬುದ್ಧಿಗೆಟ್ಟವರೂ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರೂ ಆಗಿದ್ದಾರೆ.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟದ್ದರಿಂದ ಕಂದುಬೆಳ್ಳಿಯೆನಿಸಿಕೊಳ್ಳುವರು ಎಂದು ಹೇಳಿದ್ದಾನೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಹೊಲಸು ಮಾತು ಹುಚ್ಚು ಮಾತು ಕುಚೋದ್ಯ ಮಾತು ಇವು ಬೇಡ, ಅಯುಕ್ತವಾಗಿವೆ;


ಅವರು ಇಂಥದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ತುಚ್ಫವಾದ ಕಾಮಾಭಿಲಾಷೆಗೆ ಒಪ್ಪಿಸಿದನು. ಹೇಗಂದರೆ ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ಬಿಟ್ಟು ಸ್ವಭಾವಕ್ಕೆ ವಿರುದ್ಧವಾದ ಭೋಗವನ್ನು ಅನುಸರಿಸಿದರು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ಹೀಗೆ ಮಾತಾಡುವವರು ಒಂದು ಸಂಗತಿಯನ್ನು ತಿಳಿದರೂ ಬೇಕೆಂದು ಮರೆತು ಬಿಡುತ್ತಾರೆ; ಅದೇನಂದರೆ - ಪೂರ್ವಕಾಲದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನಿಂದ ಉಂಟಾಗಿ ನೀರಿನಿಂದ ಆಧಾರಗೊಂಡಿರುವಲ್ಲಿ


ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸುವದಕ್ಕೆ ನನಗೆ ಕ್ರಿಸ್ತನಲ್ಲಿ ಪೂರಾ ಅಧಿಕಾರವಿದ್ದರೂ


ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ಮನುಷ್ಯರ ಕೆಟ್ಟತನವು ಭೂವಿುಯ ಮೇಲೆ ಹೆಚ್ಚಾಗಿರುವದನ್ನೂ ಅವರು ಹೃದಯದಲ್ಲಿ ಯೋಚಿಸುವದೆಲ್ಲವು ಯಾವಾಗಲೂ ಬರೀ ಕೆಟ್ಟದ್ದಾಗಿರುವದನ್ನೂ


ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ.


ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.


ಇದಲ್ಲದೆ ನಾನೇ ಯೆಹೋವನು ಎಂದು ಅವರು ತಿಳುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇವಿುಸಿ


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು