Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:16 - ಕನ್ನಡ ಸತ್ಯವೇದವು J.V. (BSI)

16 ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” ಎಂದು ಯೆಶಾಯ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಸಗ್ಳೆ ಜಾನಾನಿ ಬರಿ ಖಬರ್ ಸ್ವಿಕಾರ್ ಕರುಕ್‍ನ್ಯಾತ್. ಇಸಾಯಿಯಾ ಅಪ್ನಿಚ್ ಮನ್ತಾ, “ಸರ್ವೆಸ್ವರಾ ಅಮ್ಚ್ಯಾ ಬಾತ್ಮಿ ವರ್‍ತಿ ಕೊನ್ ವಿಶ್ವಾಸ್ ಕರ್‍ಲ್ಯಾನಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:16
21 ತಿಳಿವುಗಳ ಹೋಲಿಕೆ  

ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಚೆನ್ನಾಗಿ ಓಡುತ್ತಾ ಇದ್ದಿರಿ; ನೀವು ಸತ್ಯವನ್ನು ಅನುವರ್ತಿಸದಂತೆ ಯಾರು ನಿಮ್ಮನ್ನು ತಡೆದರು?


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.


ಆದರೂ ನೀವು ನನ್ನ ಕುರಿಗಳಿಗೆ ಸೇರಿದವರಲ್ಲವಾದದರಿಂದ ನಂಬದೆ ಇದ್ದೀರಿ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ; ಅದೇನಂದರೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು