Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:19 - ಕನ್ನಡ ಸತ್ಯವೇದವು J.V. (BSI)

19 ಆದರೆ ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳುಕೊಳ್ಳಲಿಲ್ಲವೇನು ಎಂದು ಕೇಳುತ್ತೇನೆ. ಈ ವಿಷಯದಲ್ಲಿ - ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡುಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ: “ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು. ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಪರ್ತುನ್ ಮಿಯಾ ಇಚಾರ್ತಾ: ಇಸ್ರಾಯೆಲಾಚ್ಯಾ ಲೊಕಾಕ್ನಿ ಹೆ ಕಳುಕ್‍ ನಾ ಅಶಿಲ್ ಕಾಯ್? ಮೊಯ್ಜೆ ಅಪ್ನಿಚ್ ಅದ್ದಿ ಜಬಾಬ್ ದಿತಾ, ಮಾಜ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿ ಸರ್ಕೆ ಕರುಕ್ ಮಿಯಾ ದುಸ್ರ್ಯಾ ದೆಶಾಕ್ನಿ ವಾಪರ್‍ತಾ; ಅನಿ ಪಿಶ್ಯಾಂಚ್ಯಾ ಎಕ್ ದೆಸಾಕ್ ಲಾಗುನ್ ಮಿಯಾ ಮಾಜ್ಯಾ ಲೊಕಾಕ್ನಿ ರಾಗ್ ಯೆಯ್ ಸರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:19
19 ತಿಳಿವುಗಳ ಹೋಲಿಕೆ  

ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಹಾಗಾದರೆ ಅವರು ಬಿದ್ದೇ ಹೋಗುವಂತೆ ಎಡವಿದರೇನು ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಹುರುಡು ಹುಟ್ಟಿಸುತ್ತಾನೆ.


ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.


ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.


ನೀವು ಅಜ್ಞಾನಿಗಳಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕ ವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ಏನು, ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವದಿಲ್ಲ.


ಹೀಗೆ ಹೇಳುವದರಿಂದ ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವೆಂದು ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ.


ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ದೇವರು ಹಿಂದಿನ ಕಾಲದ ಪಾಪಗಳನ್ನು ದಂಡಿಸದೆ ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿಸ್ವರೂಪನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವವನಾಗಿಯೂ ಕಾಣಿಸಿಕೊಂಡಿದ್ದಾನೆ.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು