Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:2 - ಕನ್ನಡ ಸತ್ಯವೇದವು J.V. (BSI)

2 ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ತೆಂಚಿ ಭಕ್ತಿ ದೆವಾ ವರ್‍ತಿ ಲೈ ಘಟ್ ಹಾಯ್, ಖರೆ ತೆಂಚಿ ಭಕ್ತಿ ಖರ್ಯಾ ಬುದ್ವಂತ್ಕಿ ವರ್‍ತಿ ಠಿಕುನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:2
22 ತಿಳಿವುಗಳ ಹೋಲಿಕೆ  

ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಮತ್ತು ನಾನು ದೇವರನ್ನು ಪ್ರಾರ್ಥಿಸಿ -


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ತಿಳುವಳಿಕೆಯಿಲ್ಲದೆ ಕೋರುವದು ಅಯುಕ್ತ; ದುಡುಕುವ ಕಾಲು ದಾರಿ ತಪ್ಪುವದು.


ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ಅವರು ಶಕ್ತ್ಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.


ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.


ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ; ಆ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿಹೇಳುತ್ತೇನೆ.


ಇವನು ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ಹಿರಿಯಾಪೊಲಿಯವರಿಗೋಸ್ಕರವೂ ಬಹಳ ಪ್ರಯಾಸ ಪಡುತ್ತಾನೆಂದು ಸಾಕ್ಷಿ ಹೇಳುತ್ತೇನೆ.


ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು